ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ 
ಪ್ರಧಾನ ಸುದ್ದಿ

ಹಸಿದವರಿಗೇ ಗೊತ್ತು ಅನ್ನದ ಬೆಲೆ: ಎಚ್ ಆಂಜನೇಯ

ಅನ್ನಭಾಗ್ಯ ಯೋಜನೆಗೆ ವಿರೋಧ ವ್ಯಕ್ತಪಡಿಸುವವರು ಬಡವರ ವಿರೋಧಿಗಳು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಕಿಡಿ ಕಾರಿದ್ದಾರೆ.

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ವಿರೋಧ ವ್ಯಕ್ತಪಡಿಸುವವರು ಬಡವರ ವಿರೋಧಿಗಳು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಕಿಡಿ ಕಾರಿದ್ದಾರೆ.

ಸಾಹಿತಿ ಎಸ್.ಎಲ್. ಭೈರಪ್ಪ ಅವರು ಸರ್ಕಾರದ ಅನ್ನಭಾಗ್ಯ ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೂಲಿನಾಲಿ ಮಾಡಿದವರಿಗೆ ಹಸಿವಿನಿಂದ ಅತ್ತವರಿಗೆ ಮಾತ್ರ ಅನ್ನದ ಮೌಲ್ಯ ಗೊತ್ತಾಗುತ್ತದೆ. ಹಸಿವಿನಿಂದ ಅಳುವ ಮಕ್ಕಳನ್ನು ನೋಡಿಯಾದರೂ ಅವರು ಅನ್ನದ ಬೆಲೆ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. ಗ್ರಾಮೀಣ ಪ್ರದೇಶದ ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿದ್ದರು. ಅವರ ಎದೆಯ ಗೂಡಿನ ಎಲುಬು ಕಾಣುತ್ತಿತ್ತು.

ಈ ಹಿನ್ನೆಲೆಯಲ್ಲಿ ಅವರನ್ನು ಬಲಪಡಿಸಲು ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಭೈರಪ್ಪನವರು ಹಸಿದ ಮಕ್ಕಳ ಅಳುವು ಕೇಳಿಸಿಕೊಂಡಿದ್ದರೆ ಈ ರೀತಿ ಹೇಳಿಕೆ ಕೊಡುತ್ತಿರಲಿಲ್ಲ. ನಮ್ಮ ಸರ್ಕಾರ ಬಡವರ ಪರ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಇನ್ನಷ್ಟು ಯೋಜನೆಗಳನ್ನು ಹುಡುಕಿ ಹುಡುಕಿ ಜಾರಿಗೊಳಿಸುತ್ತೇವೆ ಎಂದರು ಆಂಜನೇಯ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್ 2026: ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ?, ಕೊಲಂಬೋದಲ್ಲಿ ಶೇ.94ರಷ್ಟು ವರ್ಷಧಾರೆ ಸಾಧ್ಯತೆ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ

2026ರ ಮೊದಲ ಸೂರ್ಯಗ್ರಹಣ: ಯಾವಾಗ ಮತ್ತು ಎಲ್ಲಿ ವೀಕ್ಷಿಸಬೇಕು? ಇಲ್ಲಿದೆ ವಿವರ

'37,000 ಕೋಟಿ ರೂ. ಬಾಕಿ ಪಾವತಿ ಮಾಡ್ತೀರೋ ಇಲ್ವೋ?': ರಾಜ್ಯ ಸರ್ಕಾರಕ್ಕೆ ಕರ್ನಾಟಕ ಗುತ್ತಿಗೆದಾರ ಪ್ರತಿಭಟನೆ ಎಚ್ಚರಿಕೆ!

ಬೆಂಗಳೂರಿನ ಡಬಲ್ ಡೆಕ್ಕರ್ ಯೋಜನೆ ಬಗ್ಗೆ ಕೇಂದ್ರ ಕಳವಳ!

SCROLL FOR NEXT