ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ರಂಜಾನ್ ತಿಂಗಳಲ್ಲಿ ಕದನವಿರಾಮ ಮನವಿ ತಿರಸ್ಕರಿಸಿದ ತಾಲಿಬಾನ್

ಆಫ್ಘಾನಿಸ್ಥಾನದ ಧರ್ಮಗುರುಗಳು ರಂಜಾನ್ ವೇಳೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸುವಂತೆ ತಾಲಿಬಾನ್ ಭಯೋತ್ಪಾದಕ ಸಂಘಟನೆಗೆ ಮಾಡಿದ್ದ

ಕಾಬುಲ್: ಆಫ್ಘಾನಿಸ್ಥಾನದ ಧರ್ಮಗುರುಗಳು ರಂಜಾನ್ ವೇಳೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸುವಂತೆ ತಾಲಿಬಾನ್ ಭಯೋತ್ಪಾದಕ ಸಂಘಟನೆಗೆ ಮಾಡಿದ್ದ ಮನವಿಯನ್ನು ತಿರಸ್ಕರಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಈ ಮನವಿಯನ್ನು ನಾವು ತಿರಸ್ಕರಿಸಿರುವುದಲ್ಲದೆ ರಂಜಾನ್ ವೇಳೆಯಲ್ಲಿ ಹೆಚ್ಚಿನ ದಾಳಿಗಳನ್ನು ನಡೆಸುತ್ತೇವೆ ಎಂದು ತಾಲಿಬಾನ್ ವಕ್ತಾರ ತಿಳಿಸಿದ್ದಾರೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ.

ಇದಕ್ಕೂ ಮುಂಚೆ, ಜನರು ರಂಜಾನ್ ವೇಳೆಯಲ್ಲಿ ಪ್ರಾರ್ಥನೆಗೆ ತೊಡಗಿಸಿಕೊಳ್ಳಲು ತಮ್ಮ ಚಟುವಟಿಕೆಗಳನ್ನು ನಿಲ್ಲಿಸಿ ಅವಕಾಶ ಮಾಡಿಕೊಡಬೇಕೆಂದು ತಾಲಿಬಾನಿಗೆ ಧರ್ಮಗುರುಗಳು ಕೇಳಿಕೊಂಡಿದ್ದರು.

ಜೂನ್ ೧೮ ರಂದು ಪ್ರಾರಂಭವಾಗಲಿರುವ ರಂಜಾನ್ ಆಚರಣೆಗಳು ಒಂದು ತಿಂಗಳವರೆಗೆ ನಡೆಯುತ್ತವೆ. ಇದು ಮುಸ್ಲಿಂ ಬಾಂಧವರಿಗೆ ಪವಿತ್ರ ತಿಂಗಳಾಗಿದ್ದು ಉಪವಾಸ, ಪ್ರಾರ್ಥನೆ ಮತ್ತು ಆತ್ಮವಿಮರ್ಶೆ ಮಾಡಿಕೊಳ್ಳುವ ಸಮಯ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT