ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ರಂಜಾನ್ ತಿಂಗಳಲ್ಲಿ ಕದನವಿರಾಮ ಮನವಿ ತಿರಸ್ಕರಿಸಿದ ತಾಲಿಬಾನ್

ಆಫ್ಘಾನಿಸ್ಥಾನದ ಧರ್ಮಗುರುಗಳು ರಂಜಾನ್ ವೇಳೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸುವಂತೆ ತಾಲಿಬಾನ್ ಭಯೋತ್ಪಾದಕ ಸಂಘಟನೆಗೆ ಮಾಡಿದ್ದ

ಕಾಬುಲ್: ಆಫ್ಘಾನಿಸ್ಥಾನದ ಧರ್ಮಗುರುಗಳು ರಂಜಾನ್ ವೇಳೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸುವಂತೆ ತಾಲಿಬಾನ್ ಭಯೋತ್ಪಾದಕ ಸಂಘಟನೆಗೆ ಮಾಡಿದ್ದ ಮನವಿಯನ್ನು ತಿರಸ್ಕರಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಈ ಮನವಿಯನ್ನು ನಾವು ತಿರಸ್ಕರಿಸಿರುವುದಲ್ಲದೆ ರಂಜಾನ್ ವೇಳೆಯಲ್ಲಿ ಹೆಚ್ಚಿನ ದಾಳಿಗಳನ್ನು ನಡೆಸುತ್ತೇವೆ ಎಂದು ತಾಲಿಬಾನ್ ವಕ್ತಾರ ತಿಳಿಸಿದ್ದಾರೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ.

ಇದಕ್ಕೂ ಮುಂಚೆ, ಜನರು ರಂಜಾನ್ ವೇಳೆಯಲ್ಲಿ ಪ್ರಾರ್ಥನೆಗೆ ತೊಡಗಿಸಿಕೊಳ್ಳಲು ತಮ್ಮ ಚಟುವಟಿಕೆಗಳನ್ನು ನಿಲ್ಲಿಸಿ ಅವಕಾಶ ಮಾಡಿಕೊಡಬೇಕೆಂದು ತಾಲಿಬಾನಿಗೆ ಧರ್ಮಗುರುಗಳು ಕೇಳಿಕೊಂಡಿದ್ದರು.

ಜೂನ್ ೧೮ ರಂದು ಪ್ರಾರಂಭವಾಗಲಿರುವ ರಂಜಾನ್ ಆಚರಣೆಗಳು ಒಂದು ತಿಂಗಳವರೆಗೆ ನಡೆಯುತ್ತವೆ. ಇದು ಮುಸ್ಲಿಂ ಬಾಂಧವರಿಗೆ ಪವಿತ್ರ ತಿಂಗಳಾಗಿದ್ದು ಉಪವಾಸ, ಪ್ರಾರ್ಥನೆ ಮತ್ತು ಆತ್ಮವಿಮರ್ಶೆ ಮಾಡಿಕೊಳ್ಳುವ ಸಮಯ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT