ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ರಂಜಾನ್ ತಿಂಗಳಲ್ಲಿ ಕದನವಿರಾಮ ಮನವಿ ತಿರಸ್ಕರಿಸಿದ ತಾಲಿಬಾನ್

ಆಫ್ಘಾನಿಸ್ಥಾನದ ಧರ್ಮಗುರುಗಳು ರಂಜಾನ್ ವೇಳೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸುವಂತೆ ತಾಲಿಬಾನ್ ಭಯೋತ್ಪಾದಕ ಸಂಘಟನೆಗೆ ಮಾಡಿದ್ದ

ಕಾಬುಲ್: ಆಫ್ಘಾನಿಸ್ಥಾನದ ಧರ್ಮಗುರುಗಳು ರಂಜಾನ್ ವೇಳೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸುವಂತೆ ತಾಲಿಬಾನ್ ಭಯೋತ್ಪಾದಕ ಸಂಘಟನೆಗೆ ಮಾಡಿದ್ದ ಮನವಿಯನ್ನು ತಿರಸ್ಕರಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಈ ಮನವಿಯನ್ನು ನಾವು ತಿರಸ್ಕರಿಸಿರುವುದಲ್ಲದೆ ರಂಜಾನ್ ವೇಳೆಯಲ್ಲಿ ಹೆಚ್ಚಿನ ದಾಳಿಗಳನ್ನು ನಡೆಸುತ್ತೇವೆ ಎಂದು ತಾಲಿಬಾನ್ ವಕ್ತಾರ ತಿಳಿಸಿದ್ದಾರೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ.

ಇದಕ್ಕೂ ಮುಂಚೆ, ಜನರು ರಂಜಾನ್ ವೇಳೆಯಲ್ಲಿ ಪ್ರಾರ್ಥನೆಗೆ ತೊಡಗಿಸಿಕೊಳ್ಳಲು ತಮ್ಮ ಚಟುವಟಿಕೆಗಳನ್ನು ನಿಲ್ಲಿಸಿ ಅವಕಾಶ ಮಾಡಿಕೊಡಬೇಕೆಂದು ತಾಲಿಬಾನಿಗೆ ಧರ್ಮಗುರುಗಳು ಕೇಳಿಕೊಂಡಿದ್ದರು.

ಜೂನ್ ೧೮ ರಂದು ಪ್ರಾರಂಭವಾಗಲಿರುವ ರಂಜಾನ್ ಆಚರಣೆಗಳು ಒಂದು ತಿಂಗಳವರೆಗೆ ನಡೆಯುತ್ತವೆ. ಇದು ಮುಸ್ಲಿಂ ಬಾಂಧವರಿಗೆ ಪವಿತ್ರ ತಿಂಗಳಾಗಿದ್ದು ಉಪವಾಸ, ಪ್ರಾರ್ಥನೆ ಮತ್ತು ಆತ್ಮವಿಮರ್ಶೆ ಮಾಡಿಕೊಳ್ಳುವ ಸಮಯ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT