ಗೃಹ ಸಚಿವ ರಾಜನಾಥ್ ಸಿಂಗ್ 
ಪ್ರಧಾನ ಸುದ್ದಿ

ಜಮ್ಮು ಕಾಶ್ಮೀರದ ಭಯೋತ್ಪಾದಕ ಘಟನೆಗಳಲ್ಲಿ ಶೇಕಡಾ ೨೫ ಇಳಿಮುಖ: ರಾಜನಾಥ್ ಸಿಂಗ್

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಸಂಬಂಧದ ಘಟನೆಗಳು ೨೫% ಇಳಿಮುಖ ಕಂಡಿವೆ ಹಾಗೂ ಭದ್ರತಾ ವಾತಾವರಣ ಗಣನೀಯವಾಗಿ ಉತ್ತಮಗೊಂಡಿದೆ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಸಂಬಂಧದ ಘಟನೆಗಳು ೨೫% ಇಳಿಮುಖ ಕಂಡಿವೆ ಹಾಗೂ ಭದ್ರತಾ ವಾತಾವರಣ ಗಣನೀಯವಾಗಿ ಉತ್ತಮಗೊಂಡಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಇಂದು ತಿಳಿಸಿದ್ದಾರೆ.

"ರಾಜ್ಯದ ಅಥವಾ ದೇಶದ ಅಭಿವೃದ್ಧಿಗೆ ಬೇಕಿರುವ ಪೂರ್ವಾಪೇಕ್ಷೆ ಶಾಂತಿಯುತ ಮತ್ತು ಸುರಕ್ಷತಾ ವಾತಾವರಣ. ಇದನ್ನು ಸೃಶ್ಟಿಸುವತ್ತ ಕೇಂದ್ರ ಸರ್ಕಾರ ಗಮನ ಹರಿಸಿದೆ.

"ಜಮ್ಮು ಕಾಶ್ಮೀರದ ಭದ್ರತಾ ಪರಿಸ್ಥಿತಿ ಗಣನೀಯವಾಗಿ ಉತ್ತಮಗೊಂಡಿದೆ ಎಂದು ತಿಳಿಸಲು ನಾನು ಇಚ್ಚಿಸುತ್ತೇನೆ. ಹಿಂಸೆ ಕೂಡ ಗಣನೀಯ ಇಳಿಮುಖ ಕಂಡಿದೆ. ಅಷ್ಟೇ ಅಲ್ಲ ಭಯೋತೊಪಾದಕ ಘಟನೆಗಳಲ್ಲೂ ೨೫% ಇಳಿಮುಖವಾಗಿದೆ" ಎಂದು ಗೃಹ ಸಚಿವರು ನವದೆಹಲಿಯಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.

ವಿತ್ತ ಸಚಿವ ಅರುಣ್ ಜೇಟ್ಲಿ ಜೊತೆ ನಡೆದ ಜಂಟಿ ಪತ್ರಿಕಾ ಘೋಷ್ಠಿಯಲ್ಲಿ ಜಮ್ಮು ಕಾಶ್ಮೀರದ ಅಭಿವೃದ್ಧಿಗೆ ವಿತ್ತ ಸಚಿವರು ೨೪೩೭ ಕೋಟಿಯ ವಿಶೇಷ ಪ್ಯಾಕೇಜ್ ಕೂಡ ಘೋಷಿಸಿದ್ದಾರೆ. ಸತತ ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಜನತೆಯ ಪರಿಹಾರಕ್ಕಾಗಿ ಈ ಸಹಾಯಧನ ಘೋಷಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT