ಅಂಬರೀಶ್ 
ಪ್ರಧಾನ ಸುದ್ದಿ

ನಿರ್ಮಾಪಕರ ಧರಣಿ: ಭಿಕ್ಷುಕರಿಗೆ ಯಾವುದೇ ಆಯ್ಕೆ ಇಲ್ಲ, ಅಂಬರೀಶ್ ವ್ಯಂಗ್ಯ

ಸ್ಯಾಂಡಲ್‌ವುಡ್ ಚಿತ್ರರಂಗದ ನಿರ್ಮಾಪಕರು ಧರಣಿ ನಡೆಸುತ್ತಿದ್ದು, ಈ ಸಂಬಂಧ ಮಾತನಾಡಿದ ಕಲಾವಿದರ ಸಂಘದ ಅಧ್ಯಕ್ಷ ಅಂಬರೀಶ್ ಅವರು ಬೆಗ್ಗರ್ಸ್ ಹ್ಯಾವ್ ನೋ ಚಾಯ್ಸ್...

ಬೆಂಗಳೂರು: ಸ್ಯಾಂಡಲ್‌ವುಡ್ ಚಿತ್ರರಂಗದ ನಿರ್ಮಾಪಕರು ಧರಣಿ ನಡೆಸುತ್ತಿದ್ದು, ಈ ಸಂಬಂಧ ಮಾತನಾಡಿದ ಕಲಾವಿದರ ಸಂಘದ ಅಧ್ಯಕ್ಷ ಅಂಬರೀಶ್ ಅವರು ಬೆಗ್ಗರ್ಸ್ ಹ್ಯಾವ್ ನೋ ಚಾಯ್ಸ್(ಬಿಕ್ಷುಕರಿಗೆ ಯಾವುದೇ ಆಯ್ಕೆ ಇಲ್ಲ) ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಲಾವಿದರ ಸಂಘದಿಂದ ನಮ್ಮ ಸಮಸ್ಯೆಗಳಿಗೆ ಸೂಕ್ತ ಪ್ರತಿಕ್ರಿಯೆ ಸಿಗುತ್ತಿಲ್ಲ ಎಂದು ಆರೋಪಿಸಿ ಸ್ಯಾಂಡಲ್‌ವುಡ್ ಚಿತ್ರರಂಗದ ನಿರ್ಮಾಪಕರು ಕಳೆದ ಹದಿನೇಳು ದಿನಗಳಿಂದ ಧರಣಿ ಕುಳಿತಿದ್ದು, ಅಂಬರೀಶ್ ಅವರ ಈ ಹೇಳಿಕೆ ನಿರ್ಮಾಪಕರು ಸಹನೆ ಕೆಡುವಂತೆ ಮಾಡಿದೆ.

ತಮ್ಮ ಬಳಿಗೆ ಚರ್ಚಿಸಲು ಬಂದಿದ್ದ ನಿರ್ಮಾಪಕರಾದ ಮುನಿರತ್ನ ಹಾಗೂ ಕೆ.ಮಂಜು ಚರ್ಚಿಸಿದ ಬಳಿಕ ಮಾತನಾಡಿದ ಅಂಬರೀಶ್, ನನ್ನ ಕೆಲಸಕ್ಕಾಗಿ ಬಂದಿದ್ದಲ್ಲ. ಈಗ ನನ್ನ ವೃತ್ತಿಯೂ ಅದಲ್ಲ, ನಾನು ಬಂದಿದ್ದು ಚಿತ್ರರಂಗಕ್ಕೋಸ್ಕರ, ಈಗ ಸಮಸ್ಯೆ ಇರುವರು ಯಾರು? ಸಮಸ್ಯೆ ಇರುವರು ಅಲ್ಲಿ ಕೂಡಾಗುತ್ತಿದ್ದಾರೆ. ಹಿಂದೆ ಬಿಕ್ಷುಕರಿಗೆ 1 ರುಪಾಯಿ ಕೊಟ್ರೆ ಸುಮ್ಮನೆ ಹೋಗುತ್ತಿದ್ದರು. ಆದರೆ ಈಗ ಪರಿಸ್ಥಿತಿ ಆಗಿಲ್ಲ, 10 ರುಪಾಯಿ ಕೊಡಬೇಕು. ಬೆಗ್ಗರ್ಸ್ ಹ್ಯಾವ್ ನೋ ಚಾಯ್ಸ್, ಬೆಗ್ಗರ್ಸ್ ಆರ್ ನಾಟ್ ಚೂಚರ್ಸ್ ಎಂದು ವ್ಯಂಗ್ಯವಾಡಿದ್ದಾರೆ.

ಕಲಾವಿದರ್ಯಾರು ನಿರ್ಮಾಪಕರ ಬಳಿಗೆ ಹೋಗುವುದಿಲ್ಲ ನಿರ್ಮಾಪಕರೇ ಕಲಾವಿದರ ಬಳಿ ಬರುತ್ತಾರೆ. ಸಮಸ್ಯೆಗಳಿರುವ ಜನ ಈಗ ಪ್ರತಿಭಟನೆ ನಡೆಸುತ್ತಿದ್ದಾರೆ ಅವರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವತ್ತ ಯೋಚಿಸಬೇಕು ಎಂದು ನಿರ್ಮಾಪಕರ ವಿರುದ್ಧ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT