ನಿರ್ಮಾಪಕರೊಂದಿಗೆ ರೋಷನ್ ಬೇಗ್ 
ಪ್ರಧಾನ ಸುದ್ದಿ

ನಿರ್ಮಾಪಕರ ಸಮಸ್ಯೆ ನಿವಾರಣೆಗೆ ಸರ್ಕಾರ ಸಿದ್ಧ: ರೋಷನ್ ಬೇಗ್

ಸ್ಯಾಂಡಲ್ ವುಡ್ ನಿರ್ಮಾಪಕರ ಸಮಸ್ಯೆಗಳನ್ನು ಈಡೇರಿಸುವುದಾಗಿ ವಾರ್ತಾ ಸಚಿವ ರೋಷನ್ ಬೇಗ್ ಅವರ ಭರವಸೆ ಹಿನ್ನೆಲೆಯಲ್ಲಿ ನಿರ್ಮಾಪಕರು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ...

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕರ ಸಮಸ್ಯೆಗಳನ್ನು ಈಡೇರಿಸುವುದಾಗಿ ವಾರ್ತಾ ಸಚಿವ ರೋಷನ್ ಬೇಗ್ ಅವರ ಭರವಸೆ ಹಿನ್ನೆಲೆಯಲ್ಲಿ ನಿರ್ಮಾಪಕರು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆದು ಶೀಘದಲ್ಲೇ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವ ರೋಷನ್ ಬೇಗ್ ನಿರ್ಮಾಪಕರ ಮನವೊಲಿಸಿದ್ದು, ನಿರ್ಮಾಪಕರು ಉಪವಾಸ ಸತ್ಯಾಗ್ರಹ ಹಿಂಪಡೆದಿದ್ದಾರೆ.

ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ  ನೀಡಿದ ರೋಷನ್ ಬೇಗ್ ಕಲಾವಿದರು ಹಾಗೂ ನಿರ್ಮಾಪಕರ ಸಮಸ್ಯೆ ಬಗ್ಗೆ ಮಾಹಿತಿ ಪಡೆದು ಶೀಘ್ರದಲ್ಲೇ ಈ ಸಮಸ್ಯೆ ಪರಿಹರಿಸಲು ಸರ್ಕಾರ ಮಧ್ಯೆ ಪ್ರವೇಶಿಸಿ ಸಮಸ್ಯೆಗೆ ಸೂಕ್ತ ಪರಿಹಾರ ದೊರಕಿಸುವುದಾಗಿ ನೀಡಿ ಭರವಸೆ ಹಿನ್ನೆಲೆಯಲ್ಲಿ ನಿರ್ಮಾಪಕರು ತಾತ್ಕಾಲಿಕವಾಗಿ ಸತ್ಯಾಗ್ರಹ ಕೈಬಿಟ್ಟಿದ್ದಾರೆ. ಈ ವೇಳೆ ವಾಟಾಳ್ ನಾಗರಾಜ್, ಬಾಮಾ ಹರೀಶ್, ಸಾರಾ ಗೋವಿಂದ್, ಎಸ್ ನಾರಾಯಣ್ ಮೊದಲಾದವರು ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT