ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಮತ್ತು ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಪಾಕಿಸ್ತಾನ ಪ್ರಧಾನಿ ಜೊತೆ ಮೋದಿ ರಂಜಾನ್ ರಾಜತಾಂತ್ರಿಕತೆ

ರಂಜಾನ್ ಪವಿತ್ರ ತಿಂಗಳು ಇನ್ನೇನು ಪ್ರಾರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನೆರೆಹೊರೆಯ ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳಾದ ಪಾಕಿಸ್ತಾನ,

ನವದೆಹಲಿ: ರಂಜಾನ್ ಪವಿತ್ರ ತಿಂಗಳು ಇನ್ನೇನು ಪ್ರಾರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನೆರೆಹೊರೆಯ ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳಾದ ಪಾಕಿಸ್ತಾನ, ಆಫ್ಘಾನಿಸ್ಥಾನ ಮತ್ತು ಬಾಂಗ್ಲಾದೇಶಗಳಿಗೆ ಮುಂಚಿತವಾಗಿಯೇ ಹಬ್ಬದ ಶುಭ ಕೋರಿದ್ದಾರೆ.

ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್, ಬಾಂಗ್ಲಾ ದೇಶದ ಪ್ರಧಾನಿ ಶೇಕ್ ಹಸೀನಾ ಮತ್ತು ಆಪ್ಘಾನಿಸ್ತಾನದ ಅಧ್ಯಕ್ಷ ಅಶರಫ್ ಘನಿ ಅವರುಗಳಿಗೆ ದೂರವಾಣಿ ಕರೆ ಮಾಡಿ ಅವರಿಗೂ ಮತ್ತು ಅವರ ದೇಶದ ಜನರಿಗೂ ರಂಜಾನ್ ಪವಿತ್ರ ತಿಂಗಳಿಗೆ ಶುಭ ಕೋರಿದ್ದಾರೆ. ಪ್ರಾರ್ಥನೆ ಮತ್ತು ದೈವಭಕ್ತಿಯ ಈ ತಿಂಗಳಲ್ಲಿ ಶಾಂತಿ, ಸೌಹಾರ್ದ ಮತ್ತು ನೆಮ್ಮದಿ ನೆಲೆಸಲಿ ಎಂದು ಹಾರೈಸಿದ್ದಾರೆ.

ಈ ಪವಿತ್ರ ರಂಜಾನ್ ಸಮಯದಲ್ಲಿ ಭಾರತದಲ್ಲಿ ಸೆರೆಯಲ್ಲಿರುವ ಮೀನುಗಾರರನ್ನು ಬಿಡುಗಡೆ ಮಾಡುವುದಾಗಿ ನವಾಜ್ ಶರೀಫ್ ಅವರಿಗೆ ಮೋದಿ ತಿಳಿಸಿದ್ದಾರೆ. ಶಾಂತಿ, ಗೆಳೆತನ ಮತ್ತು ಎರಡು ದೇಶಗಳ ನಡುವೆ ಸಹಕಾರ ಇರಬೇಕೆಂದು ನವಾಜ್ ಶರೀಫ್ ಅವರಿಗೆ ಮೋದಿ ತಿಳಿಸಿದ್ದಾರೆ.

ಮೋದಿಯವರ ಢಾಕಾ ಪ್ರವಾಸ ಮತ್ತು ಮಯನ್ಮಾರ್ ಗಡಿಯಲ್ಲಿ ಭಾರತ ನಡೆಸಿದ ದಾಳಿಯ ವೇಳೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಪರಸ್ಪರ ವಾಗ್ದಾಳಿ ನಡೆಸಿದ್ದವು. ಆದುದರಿಂದ ಈ ರಾಜತಾಂತ್ರಿಕ ಮಾತುಕತೆ ಮಹತ್ವ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT