ಕೊಲೆಯಾದ ಉತ್ತರ ಪ್ರದೇಶದ ಪತ್ರಕರ್ತ ಜಾಗೇಂದ್ರ ಸಿಂಗ್ 
ಪ್ರಧಾನ ಸುದ್ದಿ

ಉತ್ತರಪ್ರದೇಶ ಮೃತ ಪತ್ರಕರ್ತನ ಕುಟುಂಬಕ್ಕೆ ೩೦ ಲಕ್ಷ ಪರಿಹಾರ

ಕೊಲೆಯಾದ ಉತ್ತರ ಪ್ರದೇಶದ ಪತ್ರಕರ್ತ ಜಾಗೇಂದ್ರ ಸಿಂಗ್ ಅವರ ಕುಟುಂಬಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸೋಮವಾರ ೩೦ ಲಕ್ಷ ರೂ

ಲಕನೌ: ಕೊಲೆಯಾದ ಉತ್ತರ ಪ್ರದೇಶದ ಪತ್ರಕರ್ತ ಜಾಗೇಂದ್ರ ಸಿಂಗ್ ಅವರ ಕುಟುಂಬಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸೋಮವಾರ ೩೦ ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಕುಟುಂಬ ಸದಸ್ಯರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಕಳೆದ ವಾರದ ಕೊಲೆಯನ್ನು ವಿವರಿಸಿದ್ದು ರಾಜ್ಯಾದ್ಯಂತ ಜನರನ್ನು ಆಕ್ರೋಶಕ್ಕೆ ಗುರಿ ಮಾಡಿದ್ದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಈ ಘೋಷಣೆ ಮಾಡಿದ್ದಾರೆ.

ತಾನು ಸಾಯುವುದಕ್ಕೂ ಮುಂಚೆ, ಉತ್ತರ ಪ್ರದೇಶದ ಹಿಂದುಳಿದ ಸಮಾಜ ಕಲ್ಯಾಣ ಸಚಿವ ರಾಮ್ ಮೂರ್ತಿ ವರ್ಮಾ ತನ್ನನು ಕೊಲೆ ಮಾಡಲು ಆದೇಶ ನೀಡಿದ್ದರು ಎಂದು ಮೃತ ಪತ್ರಕರ್ತ ಆರೋಪಿಸಿದ್ದರು.

ಸಚಿವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಐದು ಜನ ಪೊಲೀಸರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಆದರೆ ಬೇರೆ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಕುಟುಂಬ ವರ್ಗ ದೂರಿದೆ.

ಸಚಿವನನ್ನು ಕೂಡಲೆ ಬಂಧಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಕುಟುಂಬ ಒಂದು ವಾರದವರೆಗೆ ಧರಣಿ ನಡೆಸಿದೆ.  

ಆದರೆ ಸಚಿವನನ್ನು ಸಮಾಜವಾದಿ ಪಕ್ಷದ ಹಲವು ಧುರೀಣರು ಬೆಂಬಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT