ಕೊಲೆಯಾದ ಉತ್ತರ ಪ್ರದೇಶದ ಪತ್ರಕರ್ತ ಜಾಗೇಂದ್ರ ಸಿಂಗ್ 
ಪ್ರಧಾನ ಸುದ್ದಿ

ಉತ್ತರಪ್ರದೇಶ ಮೃತ ಪತ್ರಕರ್ತನ ಕುಟುಂಬಕ್ಕೆ ೩೦ ಲಕ್ಷ ಪರಿಹಾರ

ಕೊಲೆಯಾದ ಉತ್ತರ ಪ್ರದೇಶದ ಪತ್ರಕರ್ತ ಜಾಗೇಂದ್ರ ಸಿಂಗ್ ಅವರ ಕುಟುಂಬಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸೋಮವಾರ ೩೦ ಲಕ್ಷ ರೂ

ಲಕನೌ: ಕೊಲೆಯಾದ ಉತ್ತರ ಪ್ರದೇಶದ ಪತ್ರಕರ್ತ ಜಾಗೇಂದ್ರ ಸಿಂಗ್ ಅವರ ಕುಟುಂಬಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸೋಮವಾರ ೩೦ ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಕುಟುಂಬ ಸದಸ್ಯರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಕಳೆದ ವಾರದ ಕೊಲೆಯನ್ನು ವಿವರಿಸಿದ್ದು ರಾಜ್ಯಾದ್ಯಂತ ಜನರನ್ನು ಆಕ್ರೋಶಕ್ಕೆ ಗುರಿ ಮಾಡಿದ್ದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಈ ಘೋಷಣೆ ಮಾಡಿದ್ದಾರೆ.

ತಾನು ಸಾಯುವುದಕ್ಕೂ ಮುಂಚೆ, ಉತ್ತರ ಪ್ರದೇಶದ ಹಿಂದುಳಿದ ಸಮಾಜ ಕಲ್ಯಾಣ ಸಚಿವ ರಾಮ್ ಮೂರ್ತಿ ವರ್ಮಾ ತನ್ನನು ಕೊಲೆ ಮಾಡಲು ಆದೇಶ ನೀಡಿದ್ದರು ಎಂದು ಮೃತ ಪತ್ರಕರ್ತ ಆರೋಪಿಸಿದ್ದರು.

ಸಚಿವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಐದು ಜನ ಪೊಲೀಸರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಆದರೆ ಬೇರೆ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಕುಟುಂಬ ವರ್ಗ ದೂರಿದೆ.

ಸಚಿವನನ್ನು ಕೂಡಲೆ ಬಂಧಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಕುಟುಂಬ ಒಂದು ವಾರದವರೆಗೆ ಧರಣಿ ನಡೆಸಿದೆ.  

ಆದರೆ ಸಚಿವನನ್ನು ಸಮಾಜವಾದಿ ಪಕ್ಷದ ಹಲವು ಧುರೀಣರು ಬೆಂಬಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!