ಕೊಲೆಯಾದ ಉತ್ತರ ಪ್ರದೇಶದ ಪತ್ರಕರ್ತ ಜಾಗೇಂದ್ರ ಸಿಂಗ್ 
ಪ್ರಧಾನ ಸುದ್ದಿ

ಉತ್ತರಪ್ರದೇಶ ಮೃತ ಪತ್ರಕರ್ತನ ಕುಟುಂಬಕ್ಕೆ ೩೦ ಲಕ್ಷ ಪರಿಹಾರ

ಕೊಲೆಯಾದ ಉತ್ತರ ಪ್ರದೇಶದ ಪತ್ರಕರ್ತ ಜಾಗೇಂದ್ರ ಸಿಂಗ್ ಅವರ ಕುಟುಂಬಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸೋಮವಾರ ೩೦ ಲಕ್ಷ ರೂ

ಲಕನೌ: ಕೊಲೆಯಾದ ಉತ್ತರ ಪ್ರದೇಶದ ಪತ್ರಕರ್ತ ಜಾಗೇಂದ್ರ ಸಿಂಗ್ ಅವರ ಕುಟುಂಬಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸೋಮವಾರ ೩೦ ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಕುಟುಂಬ ಸದಸ್ಯರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಕಳೆದ ವಾರದ ಕೊಲೆಯನ್ನು ವಿವರಿಸಿದ್ದು ರಾಜ್ಯಾದ್ಯಂತ ಜನರನ್ನು ಆಕ್ರೋಶಕ್ಕೆ ಗುರಿ ಮಾಡಿದ್ದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಈ ಘೋಷಣೆ ಮಾಡಿದ್ದಾರೆ.

ತಾನು ಸಾಯುವುದಕ್ಕೂ ಮುಂಚೆ, ಉತ್ತರ ಪ್ರದೇಶದ ಹಿಂದುಳಿದ ಸಮಾಜ ಕಲ್ಯಾಣ ಸಚಿವ ರಾಮ್ ಮೂರ್ತಿ ವರ್ಮಾ ತನ್ನನು ಕೊಲೆ ಮಾಡಲು ಆದೇಶ ನೀಡಿದ್ದರು ಎಂದು ಮೃತ ಪತ್ರಕರ್ತ ಆರೋಪಿಸಿದ್ದರು.

ಸಚಿವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಐದು ಜನ ಪೊಲೀಸರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಆದರೆ ಬೇರೆ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಕುಟುಂಬ ವರ್ಗ ದೂರಿದೆ.

ಸಚಿವನನ್ನು ಕೂಡಲೆ ಬಂಧಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಕುಟುಂಬ ಒಂದು ವಾರದವರೆಗೆ ಧರಣಿ ನಡೆಸಿದೆ.  

ಆದರೆ ಸಚಿವನನ್ನು ಸಮಾಜವಾದಿ ಪಕ್ಷದ ಹಲವು ಧುರೀಣರು ಬೆಂಬಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT