ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಆರ್. ಪಾಟೀಲ್ 
ಪ್ರಧಾನ ಸುದ್ದಿ

ಸಚಿವರ ಕಾರ್ಖಾನೆ ಗೋದಾಮಿಗೆ ಬೀಗ

ಕಬ್ಬು ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಸಚಿವರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಪಾಟೀಲ್ ಒಡೆತನದ ಕಾರ್ಖಾನೆಗಳು...

ಬಾಗಲಕೋಟೆ: ಕಬ್ಬು ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಸಚಿವರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಆರ್. ಪಾಟೀಲ್ ಒಡೆತನದ ಕಾರ್ಖಾನೆಗಳು ಸೇರಿದಂತೆ ಒಟ್ಟು ಆರು ಸಕ್ಕರೆ ಕಾರ್ಖಾನೆಗಳ ಗೋದಾಮಿಗೆ ಜಿಲ್ಲಾಡಳಿತ ಬುಧವಾರ ಬೀಗ ಜಡಿದು ದಾಸ್ತಾನು ವಶಕ್ಕೆ ಪಡೆದುಕೊಂಡಿದೆ.

ಬಾಗಲಕೋಟೆ ಜಿಲ್ಲೆಯ 9 ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಕೆಯ ಬಾಕಿ ಹಣವನ್ನು ರೈತರಿಗೆ ಪಾವತಿ ಮಾಡದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೇಘಣ್ಣವರ, ತಹಿಸೀಲ್ದಾರ್ ಮೂಲಕ ನೋಟಿಸ್ ಜಾರಿ ಮಾಡಿಸಿ ವಾರದ ಗಡುವು ನೀಡಿದ್ದರು.

ಗಡುವಿನೊಳಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ಸಕ್ಕರೆ ದಾಸ್ತಾನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ಮಧ್ಯೆ, ರೈತರ ಬಾಕಿ ಹಣ ಬಿಡುಗಡೆ ವಿಚಾರ ಸಂಬಂಧ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ನಡೆದ ಮಹತ್ವದ ಸಭೆ ವಿಫಲವಾಗಿದೆ. ಆದರೆ ಸಕ್ಕರೆ ಕಾರ್ಖಾನೆ ಮಾಲೀಕರ ಬಳಿ ದಾಸ್ತಾನಿರುವ 6 ಸಾವಿರ ಕೋಟಿ ಮೌಲ್ಯದ ಸಕ್ಕರೆಯನ್ನು ವಶಪಡಿಸಿಕೊಂಡು ಅದನ್ನು ಹರಾಜು ಹಾಕಿ ರೈತರ ಬಾಕಿ ಹಣ ವಾಪಸ್ ನೀಡುವುದಕ್ಕೆ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಾಸ್ತಾನು ಜಪ್ತಿ ಮಾಡಿಕೊಳ್ಳುವುದಕ್ಕೆ ಸರ್ಕಾರ ನಿರ್ಧರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

SCROLL FOR NEXT