ದೇವೇಂದ್ರ ಪಬ್ಲಿಕ್ ಸ್ಕೂಲ್ ನ ನಿರ್ದೇಶಕ-ಪ್ರಾಂಶುಪಾಲ ದೇವೇಂದ್ರ ಪ್ರಸಾದ್ ಅವರಿಗೆ ಥಳಿಸಿದ ನಿವಾಸಿಗಳು 
ಪ್ರಧಾನ ಸುದ್ದಿ

ಬಿಹಾರದಲ್ಲಿ ಇಬ್ಬರು ಮಕ್ಕಳ ಮೃತ ದೇಹ ಪತ್ತೆ; ಶಾಲಾ ಪ್ರಾಂಶುಪಾಲರಿಗೆ ಥಳಿತ

ಬಿಹಾರದ ನಳಂದಾ ಜಿಲ್ಲೆಯ ಪ್ರಖ್ಯಾತ ಶಾಲೆ ದೇವೇಂದ್ರ ಪಬ್ಲಿಕ್ ಸ್ಕೂಲ್ ನ ಸಮೀಪದ ಗುಂಡಿಯಲ್ಲಿ ಇಬ್ಬರು ಮಕ್ಕಳ ಮೃತ ದೇಹ ಕಂಡುಬಂದದ್ದರಿಂದ ಜನರ ಗುಂಪು

ಪಾಟ್ನಾ: ಬಿಹಾರದ ನಳಂದಾ ಜಿಲ್ಲೆಯ ಪ್ರಖ್ಯಾತ ಶಾಲೆ ದೇವೇಂದ್ರ ಪಬ್ಲಿಕ್ ಸ್ಕೂಲ್ ನ ಸಮೀಪದ ಗುಂಡಿಯಲ್ಲಿ  ಇಬ್ಬರು ಮಕ್ಕಳ ಮೃತ ದೇಹ ಕಂಡುಬಂದದ್ದರಿಂದ ಜನರ ಗುಂಪು ಶಾಲೆಯ ಪ್ರಾಂಶುಪಾಲರನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಭಾನುವಾರ ವರದಿಯಾಗಿದೆ.

ಮೊದಲಿಗೆ ಅಲ್ಲಿನ ನಿವಾಸಿಗಳು ಹಾಗೂ ಮೃತಪಟ್ಟ ಮಕ್ಕಳ ಕುಟುಂಬ ಸದಸ್ಯರು ಶಾಲೆಯ ಮೇಲೆ ದಾಳಿ ಮಾಡಿ ಅಲ್ಲಿನ ವಾಹನಗಳಿಗೆ ಬೆಂಕಿ ಹಚ್ಚಿರುವುದಲ್ಲದೆ, ಶಾಲೆಯ ಪ್ರಾಂಶುಪಾಲ ದೇವೇಂದ್ರ ಪ್ರಸಾದ್ ಅವರಿಗೆ ದೊಣ್ಣೆಗಳಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಒಂದು ವರದಿಯ ಪ್ರಕಾರ ಪ್ರಾಂಶುಪಾಲರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.

"ರವಿಕುಮಾರ್ ಮತ್ತು ಸಾಗರ್ ಕುಮಾರ್, ಡಿಪಿಎಸ್ ಶಾಲೆಯ ಈ ಇಬ್ಬರು ಮಕ್ಕಳ ದೇಹವನ್ನು ಶಾಲೆಯ ಸಮೀಪದ ನೀರು ತುಂಬಿದ್ದ ಗುಂಡಿಯಿಂದ ಹೊರತೆಗೆಯಲಾಗಿದೆ. ಇದು ಅಲ್ಲಿನ ನಿವಾಸಿಗಳನ್ನು ಕುಪಿತಗೊಳಿಸಿದೆ" ಎಂದು ನಳಂದ ಪೋಲಿಸ್ ಸ್ಟೇಷನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಕ್ಕಳು ಶಾಲೆಯ ಸಿಬ್ಬಂದಿಗಳಿಗೆ ತಿಳಿಸದೇ ಶಾಲೆ ತೊರೆದು ಹೋಗಿದ್ದರು ಎಂದು ಇದಕ್ಕೂ ಮೊದಲು ದೇವೆಂದ್ರ ಪ್ರಸಾದ್ ತಿಳಿಸಿದ್ದರು. ಪೊಲೀಸ್ ಮಹಾನಿರ್ದೇಶಕ ಸಿದ್ಧಾರ್ಥ್ ಮೋಹನ್ ಜೈನ್ ಅವರು ಈ ಘಟನೆಯಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT