ನ್ಯಾಯಮೂರ್ತಿ ವೈ. ಭಾಸ್ಕರ ರಾವ್ 
ಪ್ರಧಾನ ಸುದ್ದಿ

ಲೋಕಾಯುಕ್ತರ ರಾಜಿನಾಮೆಗೆ ಹೆಚ್ಚಿದ ಒತ್ತಡ, ವಕೀಲರಿಂದಲೇ ಆಗ್ರಹ

ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ ರಾವ್ ಅವರ ರಾಜಿನಾಮೆಗೆ ದಿನೇ ದಿನೇ ಒತ್ತಡಗಳು ಹೆಚ್ಚುತ್ತಿದ್ದು, ಮಾಜಿ ಲೋಕಾಯುಕ್ತರು,....

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ 100 ಕೋಟಿ ಲಂಚ ಆರೋಪ ಪ್ರಕರಣ ಕುರಿತು ವ್ಯಾಪಕ ಟೀಕೆಗೆ ಗುರಿಯಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ ರಾವ್ ಅವರ ರಾಜಿನಾಮೆಗೆ ದಿನೇ ದಿನೇ ಒತ್ತಡಗಳು ಹೆಚ್ಚುತ್ತಿದ್ದು, ಮಾಜಿ ಲೋಕಾಯುಕ್ತರು, ವಕೀಲರು ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ನಾಯಕರು ರಾಜಿನಾಮೆಗೆ ಆಗ್ರಹಿಸಿದ್ದಾರೆ.

ಈ ಸಂಬಂಧ ನಿನ್ನೆ ವಕೀಲರ ಸಂಘ ತುರ್ತು ಸಭೆ ಕರೆದಿತ್ತು. ಸಭೆಯ ಬಳಿಕ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಪಿಪಿ ಹೆಗ್ಡೆ ಅವರು, ಲೋಕಾಯುಕ್ತ ನ್ಯಾ.ವೈ ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್, ಕೃಷ್ಣ ರಾವ್ ಹಾಗೂ ಲೋಕಾಯುಕ್ತ ಪಿಆರ್ಒ ಸಯೀದ್ ರಿಯಾಝ್ ಅವರ ವಿರುದ್ಧ ಈ ಕೂಡಲೇ ಎಫ್ಐಆರ್ ದಾಖಲಿಸಬೇಕು ಮತ್ತು ನ್ಯಾ.ಭಾಸ್ಕರ್ ರಾವ್ ಅವರು  ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.

ವಕೀಲರ ಸಂಘ ನ್ಯಾ. ಭಾಸ್ಕರ್ ರಾವ್ ಅವರ ಪ್ರಕರಣಗಳನ್ನು ಬಹಿಷ್ಕರಿಸಲು ಮತ್ತು ಅವರ ರಾಜಿನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಹೆಗ್ಡೆ ತಿಳಿಸಿದರು.

ಇದೇ ವೇಳೆ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಲೋಕಾಯುಕ್ತರಿಂದ ರಾಜ್ಯಪಾಲ ವಿ.ಆರ್. ವಾಲಾ ಅವರಿಗೆ ರಾಜಿನಾಮೆ ಕೊಡಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ವಕೀಲರ ಸಂಘ ಹಾಗೂ ಆಮ್ ಆದ್ಮಿ ಪಕ್ಷ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT