ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ 
ಪ್ರಧಾನ ಸುದ್ದಿ

'ಲೋಕಾ' ಭ್ರಷ್ಟಾಚಾರ ತನಿಖೆ ಎಸ್ಐಟಿಗೆ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ 100 ಕೋಟಿ ಲಂಚ ಆರೋಪ ಪ್ರಕರಣದ ಕುರಿತು ವ್ಯಾಪಕ ಟೀಕೆಗೆ ಗುರಿಯಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ....

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ 100 ಕೋಟಿ ಲಂಚ ಆರೋಪ ಪ್ರಕರಣದ ಕುರಿತು ವ್ಯಾಪಕ ಟೀಕೆಗೆ ಗುರಿಯಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಮನವಿ ಮೇರೆಗೆ ಪ್ರಕರಣದ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ.

ಗೃಹ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಎಸ್.ಕೆ.ಪಟ್ನಾಯಕ್ ಅವರು ಹಗರಣದ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಕಮಲ್ ಪಂಥ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದು, ಲೋಕಾಯುಕ್ತರ ಪುತ್ರ ಹಾಗೂ ಇತರರ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲಿದೆ.

ಭಾಸ್ಕರ್ ರಾವ್ ಅವರ ಮನವಿ ಮೆರೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ತಮ್ಮ ಪುತ್ರನ ವಿರುದ್ಧ ತನಿಖೆ ನಡೆಸದಂತೆ ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಅವರಿಗೆ ಸೂಚಿಸಿದ್ದ ನ್ಯಾ.ವೈ.ಭಾಸ್ಕರ್ ರಾವ್ ಅವರು, ಈ ಸಂಬಂಧ ಕೌಶಿಕ್ ಮುಖರ್ಜಿ ಅವರಿಗೆ ಎರಡು ಪತ್ರಗಳನ್ನು ಬರೆದು, ಎಡಿಜಿಪಿ ಮಟ್ಟದ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ ರಚಿಸುವಂತೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT