ಸುಪ್ರೀಂ ಕೋರ್ಟ್ 
ಪ್ರಧಾನ ಸುದ್ದಿ

ಬಿಬಿಎಂಪಿ ಚುನಾವಣೆ ಮುಂದೂಡಿಕೆ: ಜು.3ಕ್ಕೆ ಸುಪ್ರೀಂನಲ್ಲಿ ರಾಜ್ಯ ಸರ್ಕಾರದ ಅರ್ಜಿ ವಿಚಾರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಯನ್ನು ಹೇಗಾದರೂ ಸರಿ ಮುಂದೂಡಲೇಬೇಕೆಂಬ ಹಠಕ್ಕೆ ಬಿದ್ದು ರಾಜ್ಯ ಸರ್ಕಾರ ಸುಪ್ರೀಂ...

ನವದೆಹಲಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಯನ್ನು ಹೇಗಾದರೂ ಸರಿ ಮುಂದೂಡಲೇಬೇಕೆಂಬ ಹಠಕ್ಕೆ ಬಿದ್ದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ಜುಲೈ 3ರಂದು ನಡೆಯಲಿದೆ.

ಪ್ರಸ್ತುತ 2001ರ ಜನಗಣತಿ ಪ್ರಕಾರ ಮೀಸಲು ನಿಗದಿ ಮಾಡಲಾಗಿದೆ. ಆದರೆ 2011ರ ಜನಗಣತಿಯಂತೆ ಮೀಸಲು ನಿಗದಿ ಮಾಡಿ ಚುನಾವಣೆ ನಡೆಸಲು ಅವಕಾಶ ನೀಡಬೇಕು ಎಂದು ಕೋರಿ ರಾಜ್ಯ ಸರ್ಕಾರ ಸೋಮವಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಿದ್ದು, ಜುಲೈ 3ರಂದು ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ.

ಮೇ 5 ರಂದು ಸ್ವತಃ ಸುಪ್ರೀಂಕೋರ್ಟ್ ಮೂರು ತಿಂಗಳ ಒಳಗಾಗಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಆ ಆದೇಶದಂತೆ ರಾಜ್ಯ ಸರ್ಕಾರ ಈಗ 2001ರ ಜನಗಣತಿ ಆಧಾರದ ಮೇಲೆ ಚುನಾವಣೆ ನಡೆಸುತ್ತಿದೆ. 2011ನೇ ಸಾಲಿನ ಜನಗಣತಿ ಆಧಾರದ ಮೇಲೆ ಮೀಸಲಾತಿ ನಿಗದಿ ಮಾಡದೇ ಇದ್ದರೆ ಎಸ್‍ಸಿ, ಎಸ್‍ಟಿ ಜನಾಂಗಕ್ಕೆ ಪ್ರಾತಿನಿಧ್ಯ ಕಡಮೆಯಾಗಲಿದ್ದು, ಆ ಸಮುದಾಯಕ್ಕೆ ಸಿಗಬೇಕಾದ ಸಾಮಾಜಿಕ ನ್ಯಾಯ ದಕ್ಕುವುದಿಲ್ಲ.

ಆದ್ದರಿಂದ, 2001ರ ಸಾಲಿನ ಜನಗಣತಿ ಆಧಾರದ ಮೇಲೆ ಮೀಸಲಾತಿ ನಿಗದಿ ಮಾಡಿರುವುದರಿಂದ ಅದನ್ನು ಕೈಬಿಟ್ಟು, 2011ರ ಜನಗಣತಿ ಆಧಾರದ ಮೇಲೆ ಚುನಾವಣೆ ನಡೆಸಲು ಕಾಲಾವಕಾಶ ನೀಡಬೇಕು ಎಂದು ಮೇಲ್ಮನವಿಯಲ್ಲಿ ವಿವರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT