ಲಲಿತ್ ಮೋದಿ 
ಪ್ರಧಾನ ಸುದ್ದಿ

ಲಲಿತ್ ವಿರುದ್ಧ ಚುರುಕುಗೊಂಡ `ಜಾರಿ' ತನಿಖೆ

ಒಂದು ಕಡೆ ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ವಿವಾದ ಭಾರತದಲ್ಲಿ ರಾಜಕೀಯ ಪಕ್ಷಗಳ ಬೆವರಿಳಿಸುತ್ತಿದ್ದರೆ, ಮತ್ತೊಂದೆಡೆ ಲಲಿತ್ ವಿರುದಟಛಿದ ತನಿಖೆಯನ್ನು ಜಾರಿ ನಿರ್ದೇಶನಾಲಯ ಬಿರುಸುಗೊಳಿಸಿದೆ...

ನವದೆಹಲಿ: ಒಂದು ಕಡೆ ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ವಿವಾದ ಭಾರತದಲ್ಲಿ ರಾಜಕೀಯ ಪಕ್ಷಗಳ ಬೆವರಿಳಿಸುತ್ತಿದ್ದರೆ, ಮತ್ತೊಂದೆಡೆ ಲಲಿತ್ ವಿರುದ್ಧದ ತನಿಖೆಯನ್ನು ಜಾರಿ ನಿರ್ದೇಶನಾಲಯ ಬಿರುಸುಗೊಳಿಸಿದೆ.
ತನಿಖೆ ಮುಂದುವರಿಸಲು ಸಿಂಗಾಪುರ ಮತ್ತು ಮಾರಿಷಸ್ ಸರ್ಕಾರಗಳ ಕಾನೂನು ನೆರವನ್ನೂ ಕೋರಿದೆ. ಐಪಿಎಲ್ ಹಣಕಾಸು ಅವ್ಯವಹಾರ ಮತ್ತು 2009ರ ಪಂದ್ಯದ ವೇಳೆ ಮಾಧ್ಯಮ ಹಕ್ಕುಗಳ ನೀಡಿಕೆಯಲ್ಲಿನ ಅಕ್ರಮದ ಬಗ್ಗೆ ತನಿಖೆ ತೀವ್ರಗೊಳಿಸಲು ಮುಂದಾಗಿರುವ ಜಾರಿ ನಿರ್ದೇಶನಾಲಯ (ಇಡಿ), ಎರಡೂ ದೇಶಗಳಿಗೆ ಕಳುಹಿಸುವ ಲೆಟರ್ಸ್ ರೆಗೋಟರೀಸ್(ಸಾಗರೋತ್ತರ ನ್ಯಾಯಾಂಗ ಮನವಿ) ಅನ್ನು ಕೋರ್ಟ್‍ನಿಂದ ಪಡೆಯುವ ಕಾನೂನು ಪ್ರಕ್ರಿಯೆಯನ್ನು ಆರಂಭಿಸಿದೆ.
ಇದರಿಂದಾಗಿ, ವಿದೇಶದಲ್ಲಿರುವ ಲಲಿತ್ ಅವರ ವಹಿವಾಟುಗಳು ಮತ್ತು ಅಂತಾರಾಷ್ಟ್ರೀಯ ಹಣಕಾಸು ವ್ಯವಹಾರಗಳ ಬಗ್ಗೆ ಮಾಹಿತಿ ಸಿಗಲಿವೆ. ಜತೆಗೆ, ಮುಂಬೈ ವಲಯ ಕಚೇರಿಯ ಇಡಿ ತಂಡವೊಂದು ಸಿಂಗಾಪುರಕ್ಕೆ ತೆರಳಿದೆ. ಆದರೆ, ಅವರು ತೆರಳಿದ್ದು ಬೇರೆ ಪ್ರಕರಣಗಳ ತನಿಖೆಗೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್‍ನಿಂದ ಹೊಸ ದಾಖಲೆ
ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಲಲಿತ್ ಮೋದಿ ವಿರುದ್ಧದ ಸಾಕ್ಷ್ಯ ಒದಗಿಸುವುದನ್ನು ಕಾಂಗ್ರೆಸ್ ಸತತ 2ನೇ ದಿನವೂ ಮುಂದುವರಿಸಿದೆ. ಈ ಇಬ್ಬರೂ ನಾಯಕರ  ಕುಟುಂಬಗಳ ನಡುವೆ ಕ್ರಿಮಿನಲ್ ಸಂಬಂಧವಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಧೋಲ್‍ಪುರ ಅರಮನೆಗೆ ಸಂಬಂಧಿಸಿದ ಇನ್ನಷ್ಟು ಪುರಾವೆ ಬಹಿರಂಗಪಡಿಸಿದೆ. ಧೋಲ್‍ಪುರ ಅರಮನೆ  ರಾಜಸ್ಥಾನ ಸರ್ಕಾರಕ್ಕೆ ಸೇರಿದ್ದು, ರಾಜೇ ಕುಟುಂಬಕ್ಕಲ್ಲ ಎನ್ನುವುದನ್ನು ತೋರಿಸುವ 1949ರ ದಾಖಲೆಗಳನ್ನು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಅವರು ಮಂಗಳವಾರ ಮುಂದಿಟ್ಟಿದ್ದಾರೆ. ``ರಾಜೇ ಅವರ ಪರಿತ್ಯಕ್ತ ಪತಿ ಹೇಮಂತ್ ಸಿಂಗ್ ಅವರು ಪುತ್ರ ದುಶ್ಯಂತ್ ಹೆಸರಿಗೆ ಬರೆದ ಅರಮನೆಯದು'' ಎಂಬ ಬಿಜೆಪಿ ವಾದವನ್ನು ತಳ್ಳಿ ಹಾಕಿರುವ ಜೈರಾಮ್ 2007ರಲ್ಲಿ ಹೇಮಂತ್ ಹಾಗೂ ದುಶ್ಯಂತ್ ನಡುವೆ ಕೇವಲ ಚರ ಆಸ್ತಿಗೆ ಸಂಬಂಧಿಸಿ ಮಾತ್ರ ಒಪ್ಪಂದ ನಡೆದಿದ್ದು, ಅರಮನೆ ಯಾವತ್ತೂ ಸರ್ಕಾರಕ್ಕೇ ಸೇರಿದ್ದು. 1949ರಲ್ಲಿ ಅರಮನೆಯನ್ನು ಸ್ವಾಧೀನಪಡಿಸಿಕೊಂಡಿದ್ದ ಸರ್ಕಾರ, ಆಗಿನ ಧೋಲ್‍ಪುರ ಮಹಾರಾಜರಾಗಿದ್ದ ರಾಜೇ ಅವರ ತಾತನಿಗೆ ಅವರ ಜೀವಿತಾವಧಿವರೆಗೆ ಅಲ್ಲಿ ವಾಸಿಸಲು ಅನುಮತಿ ನೀಡಿತ್ತು ಎಂದು  ಜೈರಾಮ್ ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ಅವರು ಈ ಬಗ್ಗೆ ತನಿಖೆಗೆ ಆದೇಶಿಸುವವರೆಗೂ ನಾವು ದಾಖಲೆ ಬಹಿರಂಗ ಮುಂದುವರಿಸುತ್ತೇವೆ ಎಂದೂ ಹೇಳಿದ್ದಾರೆ. ಅಷ್ಟೇ ಅಲ್ಲ, ಇತ್ತೀಚೆಗೆ ರಾಜೇ ಸರ್ಕಾರವು ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದೆ. ಇಲ್ಲೂ ಲಲಿತ್ ಮೋದಿ ಮಾಲೀಕತ್ವದ ಸಿಗರೇಟ್ ಉತ್ಪಾದಕ ಕಂಪನಿಗೆ ನೆರವಾಗುವ ಉದ್ದೇಶ ರಾಜೇಗಿತ್ತೇ ಎಂಬ ಅನುಮಾನ  ಮೂಡುತ್ತಿದೆ ಎಂದಿದ್ದಾರೆ ಜೈರಾಂ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT