ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 
ಪ್ರಧಾನ ಸುದ್ದಿ

ಮುಫ್ತಿ ಹೇಳಿಕೆಗೆ ಬಿಜೆಪಿ ಸಹಮತವಿಲ್ಲ: ರಾಜನಾಥ್ ಸಿಂಗ್

ಲೋಕಸಭೆಯಲ್ಲಿ ಬಿಜೆಪಿ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜಮ್ಮು ಕಾಶ್ಮೀರದ ಮುಖ್ಯಮಂತ್ರಿ

ನವದೆಹಲಿ: ಲೋಕಸಭೆಯಲ್ಲಿ ಬಿಜೆಪಿ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜಮ್ಮು  ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಅವರ ವಿವಾದಾತ್ಮಕ ಹೇಳಿಕೆಗೆ ತಮ್ಮ ಸಹಮತ ಇಲ್ಲ ಎಂದಿದ್ದಾರೆ.

"ಜಮ್ಮು ಕಾಶ್ಮೀರದಲ್ಲಿ ಸರಾಗವಾಗಿ ನಡೆದ ವಿಧಾನಸಭಾ ಚುನಾವಣೆಯ ಶ್ರೇಯಸ್ಸನ್ನು ಪಾಕಿಸ್ತಾನ, ಹುರಿಯತ್ ಮತ್ತು ಭಯೋತ್ಪಾದನಾ ಸಂಘಟನೆಗಳಿಗೆ ಅರ್ಪಣೆ ಮಾಡಿದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯದ್ ಅವರ ಹೇಳಿಕೆಯಿಂದ  ನಮ್ಮ ಸರ್ಕಾರ ಮತ್ತು ಬಿಜೆಪಿ ಪಕ್ಷ ದೂರ ಉಳಿಯುತ್ತದೆ"

"ಜಮ್ಮು ಕಾಶ್ಮೀರದಲ್ಲಿ ನಡೆದ ಶಾಂತಿಯುತ ಚುನಾವಣೆಯ ಶ್ರೇಯಸ್ಸು ಚುನಾವಣಾ ಆಯೋಗ, ಭದ್ರತಾ ಸೇನೆ, ಸಂಸದೀಯ ಸಮಿತಿ ಮತ್ತು ರಾಜ್ಯದ ಜನರಿಗೆ ಸಲ್ಲುತ್ತದೆ. ನಾನು ಪ್ರಧಾನಿಯವರೊಂದಿಗೆ ಚರ್ಚಿಸಿ ಅವರ ಸಹಮತದಿಂದಲೆ ಈ ಹೇಳಿಕೆ ನೀಡುತ್ತಿದ್ದೇನೆ" ಎಂದು ಲೋಕಸಭೆಯಲ್ಲಿ ವಿಪಕ್ಷಗಳ ವಿರೋಧದ ನಡುವೆ ಹೇಳಿದ್ದಾರೆ.

ಈ ಶ್ರೇಯಸ್ಸನ್ನು ಪಾಕಿಸ್ತಾನಕ್ಕೆ, ಹುರಿಯತ್ತಿಗೆ ಮತ್ತು ಭಯೋತ್ಪಾದನಾ ಸಂಘಟನೆಗೆ ಅರ್ಪಿಸಲು ಮೋದಿ ಅವರು ಮುಫ್ತಿ ಅವರ ಜೊತೆ ಯಾವುದೇ ಮಾತುಕತೆ ನಡೆಸಿರಲಿಲ್ಲ ಎಂದು ಕೂಡ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT