ನರೇಂದ್ರ ಮೋದಿ ಮತ್ತು ಮುಫ್ತಿ ಮೊಹಮ್ಮದ್ ಸಯ್ಯದ್ 
ಪ್ರಧಾನ ಸುದ್ದಿ

ದಿನ ೧: ಪಾಕಿಸ್ತಾನವನ್ನು ಪ್ರಶಂಸಿಸಿ ವಿವಾದ ಸೃಷ್ಟಿಸಿದ ಮುಫ್ತಿ

ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮುಫ್ತಿ ಮೊಹಮ್ಮದ್ ಸಯ್ಯದ್ ಮೊದಲ ದಿನವೇ ವಿವಾದಾತ್ಮಕ ಹೇಳಿಕೆ ಕೊಡುವ ಮೂಲಕ ಮೈತ್ರಿ ಪಕ್ಷ ಬಿಜೆಪಿ ಪಕ್ಷವನ್ನು ಕೆರಳಿಸಿದ್ದಾರೆ.

ಶ್ರೀನಗರ/ನವದೆಹಲಿ: ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮುಫ್ತಿ ಮೊಹಮ್ಮದ್ ಸಯ್ಯದ್ ಮೊದಲ ದಿನವೇ ವಿವಾದಾತ್ಮಕ ಹೇಳಿಕೆ ಕೊಡುವ ಮೂಲಕ ಮೈತ್ರಿ ಪಕ್ಷ ಬಿಜೆಪಿ ಪಕ್ಷವನ್ನು ಕೆರಳಿಸಿದ್ದಾರೆ. ರಾಜ್ಯದಲ್ಲಿ ಚುನಾವಣೆಯನ್ನು ಸರಾಗವಾಗಿ ನಡೆದಿದ್ದನ್ನು ಪಾಕಿಸ್ತಾನ, ಹುರಿಯತ್ ಮತ್ತು ಭಯೋತ್ಪಾದನಾ ಸಂಘಟನೆಗಳಿಗೆ ಅರ್ಪಿಸುವ ಮೂಲಕ, ಬಿಜೆಪಿ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಉಪಮುಖ್ಯಮಂತ್ರಿ ರಾಜ್ಯ ಬಿಜೆಪಿ ಅಧ್ಯಕ್ಷ ಡಾ. ನಿರ್ಮಲ್ ಷಾ ಅವರೊಂದಿಗೆ ಮೊದಲ ಪತ್ರಿಕಾ ಘೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು "ಇದನ್ನು ನಾನು ಅಧಿಕೃತವಾಗಿ ಹೇಳಲು ಇಚ್ಛಿಸುತ್ತೇನೆ ಹಾಗೆಯೆ ಪ್ರಧಾನಿ ಅವರಿಗೂ ತಿಳಿಸಿದ್ದೇನೆ, ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ಸರಾಗಿವಾಗಿ ನಡೆದಿರುವುದನ್ನು ಹುರಿಯತ್ ಮತ್ತು ಭಯೋತ್ಪಾದನಾ ಸಂಘಟನೆಗಳಿಗೆ ಅರ್ಪಿಸುತ್ತೇನೆ, ಹಾಗೇ ಗಡಿಯಿಂದಾಚೆಗೆ ಪಾಕಿಸ್ತಾನ ಕೂಡ ಇದಕ್ಕೆ ಸಹಕಾರ ನೀಡಿದೆ" ಎಂದಿದ್ದಾರೆ.

ಇದಕ್ಕೆ ಕೇಂದ್ರ ಗೃಹ ಸಚಿವ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ, ಬಿಜೆಪಿ ಪಕ್ಷದ ವಕ್ತಾರ ಸಂಬಿತ್ ಪಾತ್ರ ಅವರು ಟಿವಿ ವಾಹಿನಿಯೊಂದಿಗೆ "ಜಮ್ಮು ಕಾಶ್ಮೀರದಲ್ಲಿ ನಡೆದ ಶಾಂತಿಯುತ ಮತದಾನ ಸಾಧ್ಯವಾದದ್ದು ಚುನಾವಣಾ ಆಯೋಗ ಮತ್ತು ಭದ್ರತಾ ಪಡೆಗಳಿಂದ" ಎಂದಿದ್ದಾರೆ.

ಪಿಡಿಪಿ ಪಕ್ಷ ಮುಫ್ತಿ ಅವರ ಹೇಳಿಕೆಗೆ ಸ್ಪಷ್ಟೀಕರಣ ನೀಡಲಿದ ನಂತರ ಬಿಜೆಪಿ ಪಕ್ಷ ಪ್ರತಿಕ್ರಿಯಿಸಲಿದೆ ಎಂದಿದ್ದಾರೆ ಬಿಜೆಪಿ ಹಿರಿಯ ಮುಖಂಡರೊಬ್ಬರು.

ಮುಫ್ತಿ ಅವರ ಈ ಹೇಳಿಕೆ ಬಿಜೆಪಿ ಪಕ್ಷವನ್ನು ಇನ್ನೂ ಸಂಕಷ್ಟಕ್ಕೆ ಗುರಿ ಮಾಡಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT