ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಬಿಹಾರದಲ್ಲಿ ಆನೆ ದಾಳಿ: ಮೃತರ ಸಂಖ್ಯೆ ೪ಕ್ಕೆ ಏರಿಕೆ

ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ಕಾಡಾನೆಯೊಂದು ನಡೆಸಿದ ದಾಳಿಯಲ್ಲಿ ಇನ್ನಿಬ್ಬರು ಮೃತಪಟ್ಟಿದ್ದು ಈಗ

ಪಾಟ್ನಾ: ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ಕಾಡಾನೆಯೊಂದು ನಡೆಸಿದ ದಾಳಿಯಲ್ಲಿ ಇನ್ನಿಬ್ಬರು ಮೃತಪಟ್ಟಿದ್ದು ಈಗ ಮೃತರ ಸಂಖ್ಯೆ ೪ ಕ್ಕೆ ಏರಿದೆ.

ಸೀತಾಮರ್ಹಿಯ ಹಳ್ಳಿಗಾಡಿನ ಪ್ರದೇಶದಲ್ಲಿ ಕಾಡಾನೆಯೊಂದು ಎಗ್ಗಿಲ್ಲದೆ ಜನರ ಮೇಲೆ ನುಗ್ಗಿದ ಕಾರಣ ಮಂಗಳವಾರ ಇಬ್ಬರು ಮೃತಪಟ್ಟು ಮೂವರು ಗಾಯಗೊಂಡಿದ್ದರು. ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಬುಧವಾರ ಸಾವನ್ನಪಿದ್ದಾರೆ.  

ಅರಣ್ಯಾಧಿಕಾರಿಗಳಿಗೆ ಆನೆಯನ್ನು ಹಿಡಿಯಲು ಸಾಧ್ಯವಾಗದೆ ಹೋಗಿರುವುದರಿಂದ ಹಳ್ಳಿಗಾಡಿನ ಜನರಲ್ಲಿ ಭೀತಿ ಹುಟ್ಟಿಸಿದೆ.

ಸಿತಾಮಾರ್ಹಿ ಕಾಡಿನ ಅರಣ್ಯಾಧಿಕಾರಿ ಶಶಿ ಶೇಖರ್ ತಿಳಿಸುವಂತೆ "ನಮ್ಮಲ್ಲಿನ ಸಿಬ್ಬಂದಿಯ ಕೊರತೆಯಿಂದ ಆನೆಯನ್ನು ಹಿಡಿಯಲಾಗಿಲ್ಲ. ಹೆಚ್ಚಿನ ಸಿಬ್ಬಂದಿಗೆ ಪಾಟ್ನಾದ ಅರಣ್ಯ ಇಲಾಖೆಯವರಿಗೆ ಮನವಿ ಮಾಡಿದ್ದೇವೆ" ಎಂದಿದ್ದಾರೆ.

ಮುಜ್ಜಪ್ಫರಪುರ್ ಜಿಲ್ಲೆಯ ಆಸುಪಾಸಿನ ಹಳ್ಳಿಗಳಲ್ಲಿ ಆನೆ ಕಂಡೂಬಂದಿರುವುದಾಗಿ ಕೆಲವು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT