ಪ್ರಧಾನ ಸುದ್ದಿ

ಯೂಟ್ಯೂಬ್ ನಲ್ಲಿ ಸಂಚಲನ ಮೂಡಿಸಿದ "ಇಂಡಿಯಾಸ್ ಡಾಟರ್' ಸಾಕ್ಷ್ಯಚಿತ್ರ

ಭಾರತದಲ್ಲಿ ನಿಷೇಧವೇರಲಾಗಿರುವ ದೆಹಲಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಕೇಶ್ ಸಿಂಗ್ ಸಂದರ್ಶನ...

ನವದೆಹಲಿ: ಭಾರತದಲ್ಲಿ ನಿಷೇಧವೇರಲಾಗಿರುವ ದೆಹಲಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಕೇಶ್ ಸಿಂಗ್ ಸಂದರ್ಶನ ಒಳಗೊಂಡಿರುವ ವಿವಾದಾತ್ಮಕ "ಇಂಡಿಯಾಸ್ ಡಾಟರ್' ಸಾಕ್ಷ್ಯ ಚಿತ್ರ ಯೂಟ್ಯೂಬ್ ನಲ್ಲಿ ಸಂಚಲನ ಮೂಡಿಸಿದೆ.

ದೆಹಲಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಕೇಶ್ ಸಿಂಗ್ ಸಂದರ್ಶನ ಒಳಗೊಂಡಿರುವ ವಿವಾದಾತ್ಮಕ ಸಾಕ್ಷ್ಯ ಚಿತ್ರ "ಇಂಡಿಯಾಸ್ ಡಾಟರ್' ಪ್ರಸಾರ ಮಾಡದಂತೆ ಭಾರತ ಹೇರಿದ ಒತ್ತಡಕ್ಕೆ ಮಣಿಯದ ಬಿಬಿಸಿ ನಿಗದಿಗಿಂತ ಮೊದಲೇ ಪ್ರಸಾರ ಮಾಡಿತ್ತು. ನಿನ್ನೆ ರಾತ್ರಿ ಇಂಗ್ಲೆಂಡ್ ನಲ್ಲಿ ಸಾಕ್ಷ್ಯಚಿತ್ರ ಪ್ರಸಾರಗೊಂಡಿತ್ತು. ಅಲ್ಲದೇ ಸಾಕ್ಷ್ಯಚಿತ್ರವನ್ನು ಯೂಟ್ಯೂಬ್ ನಲ್ಲೂ ಅಪ್ ಲೋಡ್ ಮಾಡಲಾಗಿದೆ. 

ಯೂಟ್ಯೂಬ್ ನಲ್ಲಿ ಈ ಸಾಕ್ಷ್ಯಚಿತ್ರ ಸಂಚಲನ ಮೂಡಿಸಿದೆ ಎಂದು ವರದಿಗಳು ಹೇಳುತ್ತಿವೆ. ಯೂಟ್ಯೂಬ್ ಬಳಕೆದಾರ ಕೇಟ್ ಬೆವನ್ ಎಂಬ ಹೆಸರಿನಲ್ಲಿ 59 ನಿಮಿಷಗಳ ಸಾಕ್ಷ್ಯಚಿತ್ರ ಅಪ್ ಲೋಡ್ ಆಗಿದ್ದು, ಇದನ್ನು ಸಾಕಷ್ಟು ಮಂದಿ ಶೇರ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇಂಗ್ಲೆಂಡ್ ಸೇರಿದಂತೆ ಇತರೆ ದೇಶಗಳಲ್ಲಿ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿತ್ತು.

ದೆಹಲಿ ಅತ್ಯಾಚಾರ ಪ್ರಕರಣದ ಅಪರಾಧಿ ಮುಕೇಶ್‌ ಸಿಂಗ್‌ನ ಸಂದರ್ಶನ ಒಳಗೊಂಡಿರುವ ವಿವಾದಾತ್ಮಕ ಸಾಕ್ಷ್ಯ­ಚಿತ್ರ ಪ್ರಸಾರ ಮಾಡದಂತೆ ಬಿಬಿಸಿಗೆ ಸರ್ಕಾರ ಹಾಗೂ ನ್ಯಾಯಾಂಗ ಸೂಚಿಸಿತ್ತು. 

ಈ ಸಾಕ್ಷ್ಯ­ಚಿತ್ರವನ್ನು ಮಹಿಳಾ ದಿನಾಚರಣೆಯಾದ ಮಾರ್ಚ್ 8ರಂದು ಪ್ರಸಾರ ಮಾಡಲು ನಿರ್ಧರಿಸಿತ್ತು. ಆದರೆ ಇದನ್ನು ಪ್ರಸಾರ ಮಾಡದಂತೆ ಭಾರತ ಸರ್ಕಾರ ಒತ್ತಡ ಹೇರಿದ ಹಿನ್ನಲೆಯಲ್ಲಿ, ಸರ್ಕಾರದ ಸೂಚನೆಗೆ ಮಣಿಯದ ಬಿಬಿಸಿ, ನಿಗದಿಗಿಂತ ಮೊದಲೇ ಪ್ರಸಾರ ಮಾಡಿದೆ.

ಈ ನಡುವೆ ಸಾಕ್ಷ್ಯ ಚಿತ್ರದ ನಿರ್ದೇಶಕಿ ಲೆಸ್ವಿ ಉಡ್ವಿನ್‌ ಬಂಧನದ ಭೀತಿಯಿಂದ ಇಂಗ್ಲೆಂಡ್ ಗೆ ತೆರಳಿರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT