ಮಸ್ರತ್ ಆಲಂ 
ಪ್ರಧಾನ ಸುದ್ದಿ

ಹುರಿಯತ್ ತೀವ್ರಗಾಮಿ ಮಸ್ರತ್ ಅಲಂನನ್ನು ಬಂಧನಮುಕ್ತಗೊಳಿಸಲು ಜಮ್ಮು ಕಾಶ್ಮೀರ ಸರ್ಕಾರ ಸಿದ್ಧತೆ

೨೦೦೮ ಮತ್ತು ೨೦೧೦ರಲ್ಲಿ ಕಲ್ಲೆಸೆಯುವ ಪ್ರತಿಭಟನೆಗೆ ಚಾಲನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ಹುರಿಯತ್ ನ

ಜಮ್ಮು: ೨೦೦೮ ಮತ್ತು ೨೦೧೦ರಲ್ಲಿ ಕಲ್ಲೆಸೆಯುವ ಪ್ರತಿಭಟನೆಗೆ ಚಾಲನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ಹುರಿಯತ್ ನ ತೀವ್ರಗಾಮಿ ಗುಂಪಿನ ನಾಯಕ ಮಸ್ರತ್ ಆಲಂನನ್ನು ಬಿಡುಗಡೆ ಮಾಡಲು ಜಮ್ಮು ಕಾಶ್ಮೀರದ ಹೊಸ ಸರ್ಕಾರ ಸಿದ್ಧತೆ ನಡೆಸಿದೆ. ಕ್ರಿಮಿನಲ್ ಆರೋಪಗಳಿಲ್ಲದ ರಾಜಕೀಯ ಖೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡುವ ಸರ್ಕಾರದ ಹೊಸ ನೀತಿಯ ಅಂಶದ ಜಾರಿಗೆ ಸಿದ್ಧವಾಗಿದೆ.

ಜಮ್ಮು ಕಾಶ್ಮೀರ ಮುಸ್ಲಿಂ ಲೀಗ್ ನ ೪೨ ವರ್ಷದ ಆಲಂನ ಬಿಡುಗಡೆಗೆ ಗೃಹ ಸರ್ಕಾರಕ್ಕೆ ಈಗಾಗಲೇ ಆದೇಶ ಹೊರಡಿಸಿದ್ದು, ತಾಂತ್ರಿಕವಾಗಿ ಅವರು ಈಗಾಗಲೇ ಮುಕ್ತ ಎಂದು ಬಾರಾಮುಲ್ಲ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಔಪಚಾರಿಕ ಕಟ್ಟಳೆಗಳನ್ನು ಮುಗಿಸಿದರೆ ಅವರು ಬಂಧನಮುಕ್ತರಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅವರ ಕಲ್ಲೆಸೆಯುವ ಪ್ರತಿಭಟನೆಯ ಸಮಯದಲ್ಲಿ ಕಣಿವೆಯಲ್ಲಿ ಹಲವಾರು ಜನ ಮೃತಪಟ್ಟಿದ್ದರು.

ಆಲಂ ಅವರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಡಿಜಿಪಿ ಕೆ ರಾಜೇಂದ್ರ ತಿಳಿಸಿದ್ದಾರೆ.

ಯಾವುದೇ ಕ್ರಿಮಿನಲ್ ಆರೋಪಗಳಿಲ್ಲದ ರಾಜಕೀಯ ಖೈದಿಗಳನ್ನು ಬಿಡುಗಡೆ ಮಾಡುವ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯದ್ ಅವರ ಆದೇಶವನ್ನು ಪಾಲಿಸಲಿದ್ದೇವೆ ಎಂದು ರಾಜೇಂದ್ರ ಈ ಹಿಂದೆ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT