ರಾಹುಲ್ ಗಾಂಧಿ 
ಪ್ರಧಾನ ಸುದ್ದಿ

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ಅರ್ಜಿ ವಜಾ

ಮಹಾತ್ಮಾಗಾಂಧಿ ಹತ್ಯೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ದೂಷಿಸಿದ್ದ ಪ್ರಕರಣದಲ್ಲಿ ಮಾನನಷ್ಟ ಮೊಕದ್ದಮೆ ಎದುರುಸುತ್ತಿರುವ ರಾಹುಲ್ ಗಾಂಧಿ

ಮುಂಬೈ: ಮಹಾತ್ಮಾಗಾಂಧಿ ಹತ್ಯೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ದೂಷಿಸಿದ್ದ ಪ್ರಕರಣದಲ್ಲಿ ಮಾನನಷ್ಟ ಮೊಕದ್ದಮೆ ಎದುರುಸುತ್ತಿರುವ ರಾಹುಲ್ ಗಾಂಧಿ ಅವರು ಈ ಪ್ರಕರಣವನ್ನು ರದ್ದು ಮಾಡಲು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾ ಮಾಡಿದೆ. ಇದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಭಾರಿ ಹಿನ್ನಡೆ ಎನ್ನಲಾಗಿದೆ.

ಆರ್ ಎಸ್ ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಅವರು ಥಾಣೆ ಜಿಲ್ಲೆಯ ಭಿವಾಂಡಿ ಮೆಜೆಸ್ಟ್ರೆಟ್ ಕೋರ್ಟ್ ನಲ್ಲಿ ಹಾಕಿರುವ ಮಾನನಷ್ಟ ಮೊಕದ್ದಮೆಯನ್ನು ವಜಾ ಮಾಡಲು ರಾಹುಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶ ಎಂ ಎಲ್ ತಹಲಿಯಾನಿ ತಿರಸ್ಕರಿಸಿದ್ದಾರೆ.

ತಾವು ಸಲ್ಲಿಸಿರುವ ದೂರಿನಲ್ಲಿ ಕುಂಟೆ ಅವರು, ರಾಹುಲ್ ಗಾಂಧಿ ಮಾರ್ಚ್ ೬ ರಂದು ಸೋನಾಲೆಯಲ್ಲಿ ನಡೆದ ಲೋಕಸಭಾ ರ್ಯಾಲಿಯಲ್ಲಿ "ಆರ್ ಎಸ್ ಎಸ್ ಜನರು ಗಾಂಧಿಯನ್ನು ಕೊಂದದ್ದು" ಎಂದು ಹೇಳಿದ್ದಾರೆ. ಈ ಭಾಷಣದ ಮೂಲಕ ಆರ್ ಎಸ್ ಎಸ್ ನ ಪ್ರಖ್ಯಾತಿಗೆ ಮಸಿ ಬಳೆಯುವುದು ಅವರ ಉದ್ದೇಶ ಎಂದು ದೂರಿದ್ದರು.

ಈ ದೂರಿನ ಹಿನ್ನಲೆಯಲ್ಲಿ ಮೆಜೆಸ್ಟ್ರೆಟ್ ಕೋರ್ಟ್ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿತ್ತು. ಇದರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ ಅವರು ಕೋರ್ಟಿಗೆ ಬರಲು ವಿನಾಯಿತಿ ಕೋರಿ ಹಾಗು ಪ್ರಕರಣವನ್ನು ವಜಾ ಮಾಡುವಂತೆ ಕೋರಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT