ಇಂಡಿಯಾಸ್ ಡಾಟರ್ 
ಪ್ರಧಾನ ಸುದ್ದಿ

ಇಂಡಿಯಾಸ್ ಡಾಟರ್: ಮಾಧ್ಯಮ ವಿಚಾರಣೆ ನ್ಯಾಯಾಧೀಶರನ್ನು ಪ್ರಭಾವಿಸುತ್ತದೆ ಎಂದ ಕೋರ್ಟ್

ಮಾಧ್ಯಮಗಳು ನಡೆಸುವ ವಿಚಾರಣೆ ಅಪ್ರಜ್ಞಾಪೂರ್ವಕವಾಗಿ ನ್ಯಾಯಾಧೀಶರನ್ನು ಒತ್ತಡಕ್ಕೆ ಸಿಲುಕಿಸಿ

ನವದೆಹಲಿ: ಮಾಧ್ಯಮಗಳು ನಡೆಸುವ ವಿಚಾರಣೆ ಅಪ್ರಜ್ಞಾಪೂರ್ವಕವಾಗಿ ನ್ಯಾಯಾಧೀಶರನ್ನು ಒತ್ತಡಕ್ಕೆ ಸಿಲುಕಿಸಿ ಪ್ರಭಾವಿಸುತ್ತವೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಡಿಸೆಂಬರ್ ೧೬ ರಂದು ದೆಹಲಿಯಲ್ಲಿ ನಡೆದ ನಿರ್ಭಯ ರೇಪ್ ಮೇಲೆ ಬಿಬಿಸಿ ನಿರ್ಮಿಸಿದ್ದ ಸಾಕ್ಷ್ಯಚಿತ್ರದ ನಿರ್ಬಂಧದ ವಿವಾದದ ಹಿನ್ನಲೆಯಲಿ ಕೋರ್ಟ್ ಹೀಗೆ ಅಭಿಪ್ರಾಯ ಪಟ್ಟಿದೆ.

ನ್ಯಾಯಾಧೀಶರಾದ ಬಿ ಡಿ ಅಹ್ಮದ್ ಮತ್ತು ಸಂಜೀವ್ ಸಚ್ದೇವ್ ಅವರುಗಳನ್ನು ಒಳಗೊಂಡ ಪೀಠ, ಈ ಸಾಕ್ಷ್ಯಚಿತ್ರ ಪ್ರಸಾರ ಮಾಡುವ ಬಗ್ಗೆ ಮೇಲ್ಮಟ್ಟಕ್ಕೆ ಕೋರ್ಟ್ ನ ತಕಾರಾರು ಏನೂ ಇಲ್ಲ, ಆದರೆ ಸುಪ್ರಿಂ ಕೋರ್ಟ್ ತಪ್ಪಿತಸ್ಥರ ಮನವಿಯ ಬಗ್ಗೆ ತೀರ್ಪು ನೀಡಿದ ನಂತರವಷ್ಟೇ ಅದನ್ನು ಪ್ರಸಾರ ಮಾಡಬೇಕು ಎಂದು ಕೋರ್ಟ್ ತಿಳಿಸಿದೆ.

ನ್ಯಾಯಾಲಯದ ನಡವಳಿಕೆಗೆ ಈ ಸಾಕ್ಷ್ಯಚಿತ್ರ ಹಸ್ತಕ್ಷೇಪ ಮಾಡುತ್ತದೆ ಎಂದಿರುವ ಕೋರ್ಟ್ ಯಾವುದೇ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಅದನ್ನು ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ನ್ಯಾಯಪೀಠವಷ್ಟೆ ತೀರ್ಪು ನಿಡಲು ಸಾಧ್ಯ ಎಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT