ಮುಫ್ತಿ ಮೊಹಮ್ಮದ್ ಸಯ್ಯದ್ 
ಪ್ರಧಾನ ಸುದ್ದಿ

ಮಾನವ ಹಕ್ಕುಗಳ ಉಲ್ಲಂಘನೆಗೆ ಶೂನ್ಯ ಸಹನೆ; ಭದ್ರತಾ ಪಡೆಗಳಿಗೆ ಮುಫ್ತಿ ಸೂಚನೆ

ಮಾನವ ಹಕ್ಕುಗಳ ಉಲ್ಲಂಘನೆಗಳ ಬಗ್ಗೆ ಶೂನ್ಯ ಸಹನೆ ಹೊಂದುವಂತೆ ಭದ್ರತಾ ಪಡೆಗಳಿಗೆ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯದ್

ಶ್ರೀನಗರ: ಮಾನವ ಹಕ್ಕುಗಳ ಉಲ್ಲಂಘನೆಗಳ ಬಗ್ಗೆ ಶೂನ್ಯ ಸಹನೆ ಹೊಂದುವಂತೆ ಭದ್ರತಾ ಪಡೆಗಳಿಗೆ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯದ್ ಸೂಚಿಸಿದ್ದಾರೆ. ಮಾರ್ಚ್೧ ರಂದು ಬಿಜೆಪಿ-ಪಿಡಿಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಭದ್ರತೆಯ ಬಗ್ಗೆ ವಿವೇಚನೆ ನಡೆಸಿದ ಈ ಚೊಚ್ಚಲ 'ಒಗ್ಗೂಡಿಸಿದ ಪ್ರಧಾನ ಕಾರ್ಯಾಲಯ' ಸಭೆಯ ಅಧ್ಯಕ್ಷತೆಯನ್ನು ಮುಫ್ತಿ ವಹಿಸಿದ್ದರು.

ಜಮ್ಮು ಕಾಶ್ಮೀರದ ಉಪಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ನಿರ್ಮಲ್ ಸಿಂಗ್, ಸೇನೆ, ಅರೆ ಮಿಲಿಟರಿ ಪಡೆ, ಪೊಲೀಸ್, ನಾಗರಿಕ ಮತ್ತು ಗುಪ್ತಚರ ಇಲಾಖೆಯ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದ್ದರು.

'ಒಗ್ಗೂಡಿಸಿದ ಪ್ರಧಾನ ಕಾರ್ಯಾಲಯ' ಸೇನೆ, ಅರೆ ಮಿಲಿಟರಿ ಪಡೆ, ಪೊಲೀಸ್ ಹಾಗು ರಾಜ್ಯ ಮತ್ತು ಕೇಂದ್ರ ಗುಪ್ತಚರ ಇಲಾಖೆಯನ್ನು ಹೊಂದಿರುತ್ತದೆ. ಈ ಕಾರ್ಯಾಲಯಕ್ಕೆ ರಾಜ್ಯದ ಮುಖ್ಯಮಂತ್ರಿ ಅಧ್ಯಕ್ಷರಾಗಿರುತ್ತಾರೆ.

ರಾಜ್ಯದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸುವುದಕ್ಕೆ ಪ್ರಯತ್ನಿಸುತ್ತಿರುವ ಭದ್ರತಾ ಪಡೆಗಳಿಗೆ ಅಭಿನಂದಿಸಿದ ಮುಫ್ತಿ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಾಗ ಮಾನವೀಯತೆಯ ಮಾರ್ಗವನ್ನು ಅನುಸರಿಸುವಂತೆ ಒತ್ತಾಯಿಸಿದ್ದಾರೆ. ಹಾಗೆಯೇ ಮಾನವ ಹಕ್ಕುಗಳ ಉಲ್ಲಂಘನೆ ನಡೆಯದಂತೆ ಎಚ್ಚರವಹಿಸಲು ಸೂಚಿಸಿದ್ದಾರೆ. "ಮಾನವ ಹಕ್ಕುಗಳ ಉಲ್ಲಂಘನೆಯನ್ನು ಸಹಿಸುವುದಿಲ್ಲ ಮತ್ತು ಇಂತಹ ಉಲ್ಲಂಘನೆಗಳಲ್ಲಿ ಭಾಗಿಯಾದವರಿಗೆ ನೆಲದ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT