ಡಿ.ಕೆ ರವಿ 
ಪ್ರಧಾನ ಸುದ್ದಿ

ಐಎಎಸ್ ಅಧಿಕಾರಿ ರವಿ ನಿಗೂಢ ಸಾವು: ರಾಜ್ಯಾದ್ಯಂತ ಪ್ರತಿಭಟನೆ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವಿಗೆ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆ ಕೈಗೊಳ್ಳಲಾಗಿದೆ...

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವಿಗೆ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆ ಕೈಗೊಳ್ಳಲಾಗಿದೆ.

ಬೆಂಗಳೂರಿನ ನವರಂಗ್ ವೃತ್ತದ ಬಳಿ, ಕೊಪ್ಪಳ ಜಿಲ್ಲೆಯಲ್ಲಿ ರವಿ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.

ಇನ್ನೂ ಕೋಲಾರ ಮತ್ತು ತುಮಕೂರಿನಲ್ಲಿ ಬಂದ್ ಘೋಷಿಸಲಾಗಿದ್ದು, ಪ್ರತಿಭಟನೆ ನಡೆಸಲಾಗುತ್ತಿದೆ. ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡಿದ್ದಾರೆ. ರವಿ ಸಾವಿನ ಹಿಂದಿನ ರಹಸ್ಯವನ್ನು ಭೇದಿಸಿ, ಅಪರಾಧಿಗಳಿಗೆ ಶಿಕ್ಷೆ ಕೊಡುವಂತೆ ರಾಜ್ಯಾದ್ಯಂತ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಕರಣ ಕುರಿತು ನ್ಯಾಯಯುತವಾಗಿ ತನಿಖೆ ನಡೆಸಲಾಗುತ್ತದೆ, ಸತ್ಯ ಹೊರಬೀಳಲಿದೆ. ರವಿ ಅವರ ಸಾವು ಸರ್ಕಾರಕ್ಕೆ ದೊಡ್ಡ ನಷ್ಟ ತಂದುಕೊಟ್ಟಿದೆ ಎಂದು ಹೇಳಿದ್ದಾರೆ.

ಪ್ರಕರಣದ ತನಿಖಾ ತಂಡ ಕೋರಮಂಗಲದಲ್ಲಿರುವ ರವಿ ಅವರ ಮನೆಗೆ ಬೀಗ ಜಡೆದಿದ್ದು, ಅವರ ಕಛೇರಿಗೆ ಭೇಟಿ ನೀಡಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ನಾಗರಬಾವಿಯಲ್ಲಿರುವ ಅವರ ಮಾವನ ಮನೆಯಲ್ಲಿ ರವಿಯವರ ಮೃತದೇಹವನ್ನು ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.

ಇಂದು ಸಂಜೆ 5.30ಕ್ಕೆ ತುಮಕೂರಿನ ದೊಡ್ಡಕೊಪ್ಪಲಿನಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT