ಡಿ.ಕೆ.ರವಿ ಪೋಷಕರೊಂದಿಗೆ ಸಿಎಂ (ಚಿತ್ರ - ನಾಗರಾಜ್ ಗಡೇಕಲ್ ) 
ಪ್ರಧಾನ ಸುದ್ದಿ

ಸಿಬಿಐ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ, ಸಿಎಂ ಭರವಸೆಗೆ ಒಪ್ಪದ ರವಿ ಪೋಷಕರು

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರವಿ ಅವರ ಪೋಷಕರ ಮನವೊಲಿಸುವಲ್ಲಿ ಮುಖ್ಯಮಂತ್ರಿ...

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರವಿ ಅವರ ಪೋಷಕರ ಮನವೊಲಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲವಾಗಿದ್ದಾರೆ.

ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ರವಿ ಅವರ ತಂದೆ ಕರಿಯಪ್ಪ, ತಾಯಿ ಗೌರಮ್ಮ ಹಾಗೂ ಸಹೋದರ ರಮೇಶ್ ಸೇರಿದಂತೆ ಹಲವು ಸಂಬಂಧಿಕರು ಇಂದು ಮಧ್ಯಾಹ್ನದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಂಜೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು, ಪೋಷಕರೊಂದಿಗೆ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದರು.

ಮಗನನ್ನು ಕಳೆದುಕೊಂಡ ನೋವು ನಮಗೂ ಅರ್ಥ ಆಗುತ್ತೆ. ರವಿ ಸಾವಿನಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸಾವಿನ ಕುರಿತು ಸಮರ್ಪಕ ತನಿಖೆ ನಡೆಸುತ್ತೇವೆ. ಸಿಐಡಿ ತನಿಖೆಯ ಮೇಲೆ ವಿಶ್ವಾಸವಿಡಿ ಎಂದು ಸಿಎಂ ಮನವಿ ಮಾಡಿದರು.

ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ, ಯುಗಾದಿಯ ನಂತರ ಸಿಬಿಐ ತನಿಖೆಗೆ ಒಪ್ಪಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಆದರೆ ಇದಕ್ಕೆ ಒಪ್ಪದ ಪೋಷಕರು ಮರಣೋತ್ತರ ಪರೀಕ್ಷಾ ವರದಿ ಬರುವವರೆಗೂ ಪ್ರತಿಭಟನೆ ಮುಂದೂವರೆಸುವುದಾಗಿ ಹೇಳಿದರು.

ಇದಕ್ಕೂ ಮುನ್ನ ಪ್ರತಿಭಟನಾ ನಿರತ ರವಿ ಪೋಷಕರನ್ನು ಮುಖ್ಯಮಂತ್ರಿಗಳ ಕಚೇರಿ ಮಾತುಕತೆಗೆ ಆಹ್ವಾನ ನೀಡಿತ್ತು, ಆದರೆ ಆಹ್ವಾನವನ್ನು ತಿರಸ್ಕರಿಸಿದ್ದ ಪೋಷಕರು, ತಮ್ಮ ಮಗನ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವವರೆಗೆ ತಾವು ಯಾರೊಂದಿಗೂ ಮಾತುಕತೆ ನಡೆಸುವುದಿಲ್ಲ ಎಂದಿದ್ದರು. ಅಲ್ಲದೆ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸದಿದ್ದರೆ ತಾವು ವಿಧಾಸೌಧದ ಮುಂದೆಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT