ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಶ್ರೀನಗರ-ಜಮ್ಮು ಹೈವೇ ಮೂರು ದಿನದ ನಂತರ ಏಕಮಾರ್ಗಕ್ಕೆ ತೆರವು

ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ ಇಂದು ಏಕಮಾರ್ಗ ಚಾಲನೆಗೆ ತೆರವುಗೊಂಡಿದೆ.

ಶ್ರೀನಗರ: ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ ಇಂದು ಏಕಮಾರ್ಗ ಚಾಲನೆಗೆ ತೆರವುಗೊಂಡಿದೆ. ಭಾರಿ ಮಳೆ ಮತ್ತು ಭೂಕುಸಿತಗಳಿಂದ ಕಳೆದ ಮೂರು ದಿನಗಳಿಂದ ರಸ್ತೆಯನ್ನು ಓಡಾಟಕ್ಕೆ ಸ್ಥಗಿತಗೊಳಿಸಲಾಗಿತ್ತು.

"ಲಘು ಮೋಟಾರ್ ವಾಹನಗಳಿಗೆ ಇಂದು ಏಕಮಾರ್ಗವಾಗಿ ರಸ್ತೆಯನ್ನು ತೆರವುಗೊಳಿಸಲಾಗಿದೆ. ಜಮ್ಮುವಿನಿಂದ ಶ್ರೀನಗರದ ಕಡೆಗೆ ವಾಹನಗಳು ಚಲಿಸಬಹುದಾಗಿದೆ" ಎಂದು ಸಂಚಾರಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಇದರ ವಿರುದ್ಧ ದಿಕ್ಕಿನಲ್ಲಿ ಯಾವುದೇ ವಾಹನ ಚಲಿಸುವಂತಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಎಲ್ಲ ಕಾಲಗಳಿಗೂ ಕಾಶ್ಮೀರ ಮತ್ತು ದೇಶದ ಉಳಿದ ಭಾಗಗಳನ್ನು ಸಂಪರ್ಕಿಸಲು ಇರುವ ಒಂದೆ ಮಾರ್ಗ ಈ ೩೦೦ ಕಿಮೀ ಹೆದ್ದಾರಿ. ಕಣಿವೆಗೆ ಅಗತ್ಯ ವಸ್ತುಗಳ ಸರಕನ್ನು ಹೊತ್ತಿರುವ ಸುಮಾರು ೨೦೦೦ ವಾಹನಗಳು ರಸ್ತೆಯಲ್ಲಿ ಸ್ಥಗಿತಗೊಂಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT