ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಶ್ರೀನಗರ-ಜಮ್ಮು ಹೈವೇ ಮೂರು ದಿನದ ನಂತರ ಏಕಮಾರ್ಗಕ್ಕೆ ತೆರವು

ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ ಇಂದು ಏಕಮಾರ್ಗ ಚಾಲನೆಗೆ ತೆರವುಗೊಂಡಿದೆ.

ಶ್ರೀನಗರ: ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ ಇಂದು ಏಕಮಾರ್ಗ ಚಾಲನೆಗೆ ತೆರವುಗೊಂಡಿದೆ. ಭಾರಿ ಮಳೆ ಮತ್ತು ಭೂಕುಸಿತಗಳಿಂದ ಕಳೆದ ಮೂರು ದಿನಗಳಿಂದ ರಸ್ತೆಯನ್ನು ಓಡಾಟಕ್ಕೆ ಸ್ಥಗಿತಗೊಳಿಸಲಾಗಿತ್ತು.

"ಲಘು ಮೋಟಾರ್ ವಾಹನಗಳಿಗೆ ಇಂದು ಏಕಮಾರ್ಗವಾಗಿ ರಸ್ತೆಯನ್ನು ತೆರವುಗೊಳಿಸಲಾಗಿದೆ. ಜಮ್ಮುವಿನಿಂದ ಶ್ರೀನಗರದ ಕಡೆಗೆ ವಾಹನಗಳು ಚಲಿಸಬಹುದಾಗಿದೆ" ಎಂದು ಸಂಚಾರಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಇದರ ವಿರುದ್ಧ ದಿಕ್ಕಿನಲ್ಲಿ ಯಾವುದೇ ವಾಹನ ಚಲಿಸುವಂತಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಎಲ್ಲ ಕಾಲಗಳಿಗೂ ಕಾಶ್ಮೀರ ಮತ್ತು ದೇಶದ ಉಳಿದ ಭಾಗಗಳನ್ನು ಸಂಪರ್ಕಿಸಲು ಇರುವ ಒಂದೆ ಮಾರ್ಗ ಈ ೩೦೦ ಕಿಮೀ ಹೆದ್ದಾರಿ. ಕಣಿವೆಗೆ ಅಗತ್ಯ ವಸ್ತುಗಳ ಸರಕನ್ನು ಹೊತ್ತಿರುವ ಸುಮಾರು ೨೦೦೦ ವಾಹನಗಳು ರಸ್ತೆಯಲ್ಲಿ ಸ್ಥಗಿತಗೊಂಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT