ಹೈಕೋರ್ಟ್ 
ಪ್ರಧಾನ ಸುದ್ದಿ

ಡಿಕೆ ರವಿ ಪ್ರಕರಣ: ಸಿಐಡಿ ಮಧ್ಯಂತರ ವರದಿ ಬಹಿರಂಗಕ್ಕೆ ಹೈಕೋರ್ಟ್ ನಿರ್ಬಂಧ

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣದ ಸಿಐಡಿ ಮಧ್ಯಂತರ ವರದಿ ಬಹಿರಂಗಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಭಾನುವಾರ ನಿರ್ಬಂಧ ಹೇರಿದೆ.

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣದ ಸಿಐಡಿ ಮಧ್ಯಂತರ ವರದಿ ಬಹಿರಂಗಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಭಾನುವಾರ ನಿರ್ಬಂಧ ಹೇರಿದೆ.

ಇಂದು ಭಾನುವಾರವಾಗಿದ್ದರಿಂದ ತಮ್ಮ ನಿವಾಸದಲ್ಲೇ ರಿಟ್ ಅರ್ಜಿಯ ವಿಚಾರಣೆ ನಡೆಸಿದ, ನ್ಯಾಮೂರ್ತಿ ಎಸ್. ಅಬ್ದುಲ್ ನಜೀರ್ ಅವರು, ವರದಿ ಬಹಿರಂಗಕ್ಕೆ ನಿರ್ಬಂಧ ಹೇರಿದ್ದಾರೆ.

ತನಿಖೆ ಪೂರ್ಣಗೊಳಿಸದೇ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡುವಂತಿಲ್ಲ ಎಂದು ಸಿಐಡಿ ಅಧಿಕಾರಿಗಳಿಗೆ ಸೂಚಿಸಿರುವ ಹೈಕೋರ್ಟ್, ಈ ಸಂಬಂಧ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಹಾಗೂ ಗೃಹ ಇಲಾಖೆ ಮುಖ್ಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿ ಮಾಡಿದೆ.

ಡಿ.ಕೆ.ರವಿ ಅವರ ಸ್ನೇಹಿತೆಯಾಗಿದ್ದ ಮಹಿಳಾ ಐಎಎಸ್ ಅಧಿಕಾರಿ ಪತಿ, ಸಿಐಡಿ ಸಿಬ್ಬಂದಿ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು.

ತನಿಖೆ ಪೂರ್ಣಗೊಳ್ಳದೆ ಮಧ್ಯಂತರ ವರದಿ ಸಲ್ಲಿಸುವುದು ಸರಿಯಲ್ಲ ಎಂದು ಮಹಿಳಾ ಐಎಎಸ್ ಅಧಿಕಾರಿ ಪತಿ ಪರ ವಕೀಲರು ವಾದ ಮಂಡಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ನೀಡಿರುವ ಪ್ರಾಥಮಿಕ ತನಿಖಾ ವರದಿಯ ಸಂಪೂರ್ಣ ವಿವರನ್ನು ಸೋಮವಾರ ಸದನಕ್ಕೆ ನೀಡಲಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಮಹಿಳಾ ಐಎಎಸ್ ಅಧಿಕಾರಿ ಪತಿ ಹೈಕೋರ್ಟ್ ಮೊರೆ ಹೋಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!