ಡಿ.ಕೆ.ರವಿ ಕುಟುಂಬದೊಂದಿಗೆ ಸಿಎಂ 
ಪ್ರಧಾನ ಸುದ್ದಿ

ಡಿ.ಕೆ.ರವಿ ನಿಗೂಢ ಸಾವು ಪ್ರಕರಣ: ಸಿಬಿಐ ತನಿಖೆಗೆ ಕುಟುಂಬ ಸ್ವಾಗತ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿರುವ ರಾಜ್ಯ ಸರ್ಕಾರ ಕ್ರಮವನ್ನು ಕುಟುಂಬ ಸ್ವಾಗತಿಸಿದೆ...

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿರುವ ರಾಜ್ಯ ಸರ್ಕಾರ ಕ್ರಮವನ್ನು ಕುಟುಂಬ ಸ್ವಾಗತಿಸಿದೆ.

ತಮ್ಮ ಮಗನ ಸಾವು ಆತ್ಮಹತ್ಯೆಯಲ್ಲ, ಇದೊಂದು ಕೊಲೆ ಎಂದಿದ್ದ ಕುಟುಂಬ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿತ್ತು.

'ನನ್ನ ಮಗ ಈ ದೇಶದ ಮಗ. ಆತ ಈ ದೇಶಕ್ಕಾಗಿ ಹೋರಾಡಿದ್ದಾನೆ. ಅವನು ನನಗೆಷ್ಟೇ ಮಗ ಅಲ್ಲ, ಈ ದೇಶದ ಮಗ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದರೆ ಮಾತ್ರ ಆತನ ಆತ್ಮ ಶಾಂತಿ ಸಿಗುತ್ತದೆ' ಎಂದು ರವಿ ಅವರ ತಾಯಿ ಗೌರಮ್ಮ ಹೇಳಿದ್ದಾರೆ.

'ನನ್ನ ಮಗನ ಸಾವಿನ ಸತ್ಯ ಹೊರ ಬರಬೇಕು. ಆಗಲೇ ಆತನ ಆತ್ಮಕ್ಕೆ ಶಾಂತಿ ಸಿಗುತ್ತದೆ. ಸಿಬಿಐ ನಮಗೆ ನ್ಯಾಯ ಕೊಡಿಸಬೇಕು. ಆತನ ಪ್ರಮಾಣಿಕ ಕೆಲಸದ ಬಗ್ಗೆ ಜನತೆಗೆ ಗೊತ್ತು' ಎಂದು ಹೇಳಿದ್ದಾರೆ.

ಮಾರ್ಚ್ 16ರಂದು ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಡಿ.ಕೆ.ಪ್ರಕರಣವನ್ನು ಸಿಬಿಐ ಒಪ್ಪಿಸಬೇಕು ಎಂದು ಕುಟುಂಬ ಸೇರಿದಂತೆ ಪ್ರತಿಪಕ್ಷಗಳು ಹಾಗೂ ರಾಜ್ಯದ್ಯಾಂತ ತೀವ್ರ ಪ್ರತಿಭಟನೆಗಳು ನಡೆದಿದ್ದವು. ಕಡೆಗೂ ಪ್ರತಿಭಟನೆಗೆ ಮಣಿದ ಕಾಂಗ್ರೆಸ್ ಸರ್ಕಾರ ಪ್ರಕರವನ್ನು ಇಂದು ಸಿಬಿಐಗೆ ಹಸ್ತಾಂತರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT