ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಲೀ ಕೌನ್ ಸಾವಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಸಿಂಗಪುರದ ಸಂಸ್ಥಾಪಕ ಪಿತಾಮಹ ಹಾಗೂ ಮೊದಲ ಪ್ರಧಾನಿ ಲೀ ಕೌನ್ ಯೂ ಅವರು ಅಗಲಿಕೆಗೆ ಭಾರತ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸಿಂಗಪುರದ ಸಂಸ್ಥಾಪಕ ಪಿತಾಮಹ ಹಾಗೂ ಮೊದಲ ಪ್ರಧಾನಿ ಲೀ ಕೌನ್ ಯೂ ಅವರು ಅಗಲಿಕೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ ಹಾಗೂ ಲೀ ಅವರು ನಾಯಕರ ನಡುವಿನ ಸಿಂಹ ಎಂದು ಬಣ್ಣಿಸಿದ್ದಾರೆ.

"ದೂರದೃಷ್ಟಿಯಿದ್ದ ಮಹಾನಾಯಕ ಮತ್ತು ನಾಯಕರ ನಡುವಿನ ಸಿಂಹ, ಮಿ. ಲೀ ಕೌನ್ ಯೂ ಅವರ ಜೀವನ ಎಲ್ಲರಿಗೂ ಪಾಠವಾಗಬಲ್ಲದು. ಅವರ ಸಾವಿನ ಸುದ್ದಿ ಅತೀವ ದುಃಖ ತಂದಿದೆ" ಎಂದು ಅವರು ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಈ ಶೋಕಾಚರಣೆಯ ಸಂದರ್ಭದಲ್ಲಿ, ಲೀ ಅವರ ಕುಟುಂಬ ಮತ್ತು ಸಿಂಗಪುರದ ಜನತೆಯ ಜೊತೆಗೆ ಪ್ರಾರ್ಥನೆ ಸಲ್ಲಿಸುತ್ತೇನೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ" ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಲೀ ಅವರು ತೀವ್ರ ನ್ಯುಮೋನಿಯಾ ಖಾಯಿಲೆಯಿಂದ ಬಳಲಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT