ಆಲುಗಡ್ಡೆ 
ಪ್ರಧಾನ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ಆಲೂ ಬೆಳೆಗಾರನ ಆತ್ಮಹತ್ಯೆ; ಏಳಕ್ಕೆ ಏರಿದ ಸಾವಿನ ಸಂಖ್ಯೆ

ಬಂಪರ್ ಬೆಳೆಯ ಹೊರತಾಗಿಯೂ, ಕೃಷಿ ಸಾಲವನ್ನು ಹಿಂದಿರುಗಿಸಲಾಗದೆ ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿರುವ

ಬುರ್ದ್ವಾನ್: ಬಂಪರ್ ಬೆಳೆಯ ಹೊರತಾಗಿಯೂ, ಕೃಷಿ ಸಾಲವನ್ನು ಹಿಂದಿರುಗಿಸಲಾಗದೆ ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ರೈತರ ಸಾವಿನ ಸಂಖ್ಯೆ ಈಗ ಏಳಕ್ಕೆ ಏರಿಕೆಯಾಗಿದೆ.

ಬೀರ್ಭುಮ್ ಜಿಲ್ಲೆಯ ಪಕ್ಕದ ಗ್ರಾಮವಾದ ನಾನೂರಿನಲ್ಲಿ ತನ್ನ ಹೊಲದಲ್ಲಿ ಕೀಟನಾಶಕ ಸೇವಿಸಿ ೩೨ ವರ್ಷದ ಮ್ರಿನಾಲ್ ಕಾಂತಿ ಸರ್ಕಾರ್ ನೆನ್ನೆ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಅವರನ್ನು ಕೂಡಲೆ ಹತ್ತಿರದ ಆಸ್ಪತ್ರೆಗೆ ಸೇರಿಸಿದ್ದು ನಂತರ ಬುರ್ಧ್ವಾನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರಗೆ ದಾಖಲು ಮಾಡಿದ್ದರೂ ಅವರ ಆರೋಗ್ಯ ಸ್ಥಿತಿ ಹದಗೆಟ್ಟು ಇಂದು ಮೃತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಆಸ್ಪತ್ರೆ ಮೂಲಗಳ ಪ್ರಕಾರ ಈ ರೈತ ನೆನ್ನೆಯೇ ಮೃತಪಟ್ಟಿದ್ದಾರೆ. ಇವರ ಚಿಕ್ಕಪ್ಪ ಬಿಸ್ವಜಿತ್ ಸರ್ಕಾರ್ ಪ್ರಕಾರ ಈ ರೈತ ಬ್ಯಾಂಕ್ ಮತ್ತು ಖಾಸಗಿ ವ್ಯಕ್ತಿಗಳಿಂದ ೩ ಲಕ್ಷ ಸಾಲ ಪಡೆದಿದ್ದರು. ಆದರೆ ಆಲುಗಡ್ಡೆ ದರ ಚೀಲಕ್ಕೆ ೧೨೦ ರೂ ನಿಂದ ೧೦೦ ರೂಗೆ ಕುಸಿದಿರುವುದರಿಂದ ಈ ಸಾಲವನ್ನು ಹಿಂದಿರುಗಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿ ಚೀಲದಲ್ಲು ೫೦ ಕೆಜಿ ಆಲುಗಡ್ಡೆ ಇರುತ್ತದೆ.

ಕಳೆದ ೧೫ ದಿನಗಳಿಂದ ಬುರ್ಧ್ವಾನ್ ಜಿಲ್ಲೆಯಲ್ಲೇ ೬ ಸಾವು ವರದಿಯಾಗಿದೆ. ಒಳ್ಳೆಯ ಹವಾಮಾನ ಮತ್ತು ಹೆಚ್ಚಿನ ಬೆಳೆಗಾರರಿಂದ ಈ ವರ್ಷ ರಾಜ್ಯದ ಆಲುಗಡ್ಡೆ ಉತ್ಪಾದನೆಯಲ್ಲಿ ೧೫% ಏರಿಕೆ ಕಂಡಿದ್ದು, ೧೧೦ ಲಕ್ಷ ಟನ್ನುಗಳು ಹೆಚ್ಚುವರಿ ಉತ್ಪಾದನೆಯಾಗಿದೆ ಎಂದು ಪಶ್ಚಿಮಬಂಗಾಳ ಶೀತಲೀಕರಣ ದಾಸ್ತಾನು ಸಂಘದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT