ಪಿ ಚಿದಂಬರಂ 
ಪ್ರಧಾನ ಸುದ್ದಿ

ಸೆಕ್ಷನ್ ೬೬ಎ ಮಾನ್ಯತೆ ರದ್ದು: ಚಿದಂಬರಂ ಸ್ವಾಗತ

ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ ೬೬ಎ ಮಾನ್ಯತೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ

ನವದೆಹಲಿ: ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ ೬೬ಎ ಮಾನ್ಯತೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಸ್ವಾಗತಿಸಿದ್ದಾರೆ. ಇದರ ಕರಡನ್ನು ಸರಿಯಾಗಿ ಸಿದ್ಧಪಡಿಸಿರಲಿಲ್ಲ ಮತ್ತು ಅಸಂವಿಧಾನಕ ಎಂದಿದ್ದಾರೆ.

"ಐಟಿ ಕಾಯ್ದೆಯ ಸೆಕ್ಷನ್ ೬೬ಎ ಅಸಂವಿಂಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದನ್ನು ಸ್ವಾಗತಿಸುತ್ತೇನೆ. ಈ ಭಾಗದ ಕರಡನ್ನು ಸರಿಯಾಗಿ ಸಿದ್ಧಪಡಿಸಿರಲಿಲ್ಲ. ಇದರ ದುರ್ಬಳಕ್ಕೆ ಸಾಧ್ಯವಿತ್ತು, ದುರ್ಬಳಕೆಯಾಗಿತ್ತು ಕೂಡ" ಎಂದು ಅವರು ತಿಳಿಸಿದ್ದಾರೆ.

ಈಗ ವಾಕ್ ಸ್ವಾತಂತ್ರ್ಯದ ದುರ್ಬಳಕೆಯಾದ ಪ್ರಕರಣಗಳಿಗೆ ಸಾಮಾನ್ಯ ಕಾನೂನಿನಡಿಯೇ ಶಿಕ್ಷೆಗೆ ಒಳಪಡಿಸಬಹುದು ಎಂದು ಹಿಂದಿನ ಯುಪಿಎ ಸರ್ಕಾರದಲ್ಲಿ ಗೃಹ ಖಾತೆ, ಹಣಕಾಸು ಖಾತೆಗಳನ್ನು ನಿರ್ವಹಿಸಿದ್ದ ಚಿದಂಬರಂ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆರೋಗ್ಯಕರ ಟೀಕೆಗಳನ್ನು ಮಾಡುವವರನ್ನು ಕೂಡ ಬಂಧಿಸಬಹುದಾದ ಐಟಿ ಕಾಯ್ದೆಯ ಈ ವಿಭಾಗವನ್ನು ಅಸಂವಿಧಾನಕ ಎಂದು ನ್ಯಾಯಾಧೀಶ ನಾರಿಮನ್ ಇಂದು ನ್ಯಾಯಾಲಯದಲ್ಲಿ ತೀರ್ಪು ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT