ಪಿ ಚಿದಂಬರಂ 
ಪ್ರಧಾನ ಸುದ್ದಿ

ಸೆಕ್ಷನ್ ೬೬ಎ ಮಾನ್ಯತೆ ರದ್ದು: ಚಿದಂಬರಂ ಸ್ವಾಗತ

ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ ೬೬ಎ ಮಾನ್ಯತೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ

ನವದೆಹಲಿ: ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ ೬೬ಎ ಮಾನ್ಯತೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಸ್ವಾಗತಿಸಿದ್ದಾರೆ. ಇದರ ಕರಡನ್ನು ಸರಿಯಾಗಿ ಸಿದ್ಧಪಡಿಸಿರಲಿಲ್ಲ ಮತ್ತು ಅಸಂವಿಧಾನಕ ಎಂದಿದ್ದಾರೆ.

"ಐಟಿ ಕಾಯ್ದೆಯ ಸೆಕ್ಷನ್ ೬೬ಎ ಅಸಂವಿಂಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದನ್ನು ಸ್ವಾಗತಿಸುತ್ತೇನೆ. ಈ ಭಾಗದ ಕರಡನ್ನು ಸರಿಯಾಗಿ ಸಿದ್ಧಪಡಿಸಿರಲಿಲ್ಲ. ಇದರ ದುರ್ಬಳಕ್ಕೆ ಸಾಧ್ಯವಿತ್ತು, ದುರ್ಬಳಕೆಯಾಗಿತ್ತು ಕೂಡ" ಎಂದು ಅವರು ತಿಳಿಸಿದ್ದಾರೆ.

ಈಗ ವಾಕ್ ಸ್ವಾತಂತ್ರ್ಯದ ದುರ್ಬಳಕೆಯಾದ ಪ್ರಕರಣಗಳಿಗೆ ಸಾಮಾನ್ಯ ಕಾನೂನಿನಡಿಯೇ ಶಿಕ್ಷೆಗೆ ಒಳಪಡಿಸಬಹುದು ಎಂದು ಹಿಂದಿನ ಯುಪಿಎ ಸರ್ಕಾರದಲ್ಲಿ ಗೃಹ ಖಾತೆ, ಹಣಕಾಸು ಖಾತೆಗಳನ್ನು ನಿರ್ವಹಿಸಿದ್ದ ಚಿದಂಬರಂ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆರೋಗ್ಯಕರ ಟೀಕೆಗಳನ್ನು ಮಾಡುವವರನ್ನು ಕೂಡ ಬಂಧಿಸಬಹುದಾದ ಐಟಿ ಕಾಯ್ದೆಯ ಈ ವಿಭಾಗವನ್ನು ಅಸಂವಿಧಾನಕ ಎಂದು ನ್ಯಾಯಾಧೀಶ ನಾರಿಮನ್ ಇಂದು ನ್ಯಾಯಾಲಯದಲ್ಲಿ ತೀರ್ಪು ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT