ಪಿ ಚಿದಂಬರಂ 
ಪ್ರಧಾನ ಸುದ್ದಿ

ಸೆಕ್ಷನ್ ೬೬ಎ ಮಾನ್ಯತೆ ರದ್ದು: ಚಿದಂಬರಂ ಸ್ವಾಗತ

ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ ೬೬ಎ ಮಾನ್ಯತೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ

ನವದೆಹಲಿ: ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ ೬೬ಎ ಮಾನ್ಯತೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಸ್ವಾಗತಿಸಿದ್ದಾರೆ. ಇದರ ಕರಡನ್ನು ಸರಿಯಾಗಿ ಸಿದ್ಧಪಡಿಸಿರಲಿಲ್ಲ ಮತ್ತು ಅಸಂವಿಧಾನಕ ಎಂದಿದ್ದಾರೆ.

"ಐಟಿ ಕಾಯ್ದೆಯ ಸೆಕ್ಷನ್ ೬೬ಎ ಅಸಂವಿಂಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದನ್ನು ಸ್ವಾಗತಿಸುತ್ತೇನೆ. ಈ ಭಾಗದ ಕರಡನ್ನು ಸರಿಯಾಗಿ ಸಿದ್ಧಪಡಿಸಿರಲಿಲ್ಲ. ಇದರ ದುರ್ಬಳಕ್ಕೆ ಸಾಧ್ಯವಿತ್ತು, ದುರ್ಬಳಕೆಯಾಗಿತ್ತು ಕೂಡ" ಎಂದು ಅವರು ತಿಳಿಸಿದ್ದಾರೆ.

ಈಗ ವಾಕ್ ಸ್ವಾತಂತ್ರ್ಯದ ದುರ್ಬಳಕೆಯಾದ ಪ್ರಕರಣಗಳಿಗೆ ಸಾಮಾನ್ಯ ಕಾನೂನಿನಡಿಯೇ ಶಿಕ್ಷೆಗೆ ಒಳಪಡಿಸಬಹುದು ಎಂದು ಹಿಂದಿನ ಯುಪಿಎ ಸರ್ಕಾರದಲ್ಲಿ ಗೃಹ ಖಾತೆ, ಹಣಕಾಸು ಖಾತೆಗಳನ್ನು ನಿರ್ವಹಿಸಿದ್ದ ಚಿದಂಬರಂ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆರೋಗ್ಯಕರ ಟೀಕೆಗಳನ್ನು ಮಾಡುವವರನ್ನು ಕೂಡ ಬಂಧಿಸಬಹುದಾದ ಐಟಿ ಕಾಯ್ದೆಯ ಈ ವಿಭಾಗವನ್ನು ಅಸಂವಿಧಾನಕ ಎಂದು ನ್ಯಾಯಾಧೀಶ ನಾರಿಮನ್ ಇಂದು ನ್ಯಾಯಾಲಯದಲ್ಲಿ ತೀರ್ಪು ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT