ಚಿದಾನಂದ ಮೂರ್ತಿ 
ಪ್ರಧಾನ ಸುದ್ದಿ

ಸಿಎಂ ಸಮ್ಮುಖದಲ್ಲೇ ಸಾಹಿತಿ ಚಿದಾನಂದ ಮೂರ್ತಿಯನ್ನು ಎಳೆದಾಡಿದ ಪೊಲೀಸರು

ಹಿರಿಯ ಸಾಹಿತಿ ಹಾಗೂ ಸಂಶೋಧಕ ಚಿದಾನಂದ ಮೂರ್ತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಪೊಲೀಸರು ಎಳೆದಾಡಿ ಘಟನೆ...

ಬೆಂಗಳೂರು: 84 ವರ್ಷದ ಹಿರಿಯ ಸಾಹಿತಿ ಹಾಗೂ ಸಂಶೋಧಕ ಚಿದಾನಂದ ಮೂರ್ತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಪೊಲೀಸರು ಎಳೆದಾಡಿ ಘಟನೆ ಬುಧವಾರ ವಿಧಾನಸೌಧದಲ್ಲಿ ನಡೆಯಿತು.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ಸಮಾರಂಭದಲ್ಲಿ ಸ್ಪೀಕರ್ ಕಾಗೋಡು ತಮ್ಮ ಹಾಗೂ ಸಿಎಂ ಸಿದ್ದರಾಮಯ್ಯ ಸಹ ಭಾಗಿಯಾಗಿದ್ದರು.

ಸಮಾರಂಭದಲ್ಲಿ ದೇವರ ದಾಸಿಮಯ್ಯ ಹಾಗೂ ಜೇಡರ ದಾಸಿಮಯ್ಯ ಇಬ್ಬರೂ ಒಂದೇ ಎಂಬ ವಾದ ಮಂಡಿಸಲಾಯಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಚಿದಾನಂದ ಮೂರ್ತಿ ಅವರು, ದೇವರ ದಾಸಿಮಯ್ಯ ಹಾಗೂ ಜೇಡರ ದಾಸಿಮಯ್ಯ ಇಬ್ಬರೂ ಬೇರೆ ಬೇರೆ. ಇದಕ್ಕೆ ಸಾಕಷ್ಟು ಸಂಶೋಧನೆಗಳ ದಾಖಲೆ ಇದೆ. ಹಾಗಾಗಿ ಸರ್ಕಾರ ದೇವರ ದಾಸಿಮಯ್ಯ ಜಯಂತಿ ನಡೆಸುವುದು ಸರಿಯಲ್ಲ ಎಂದರು. ಇದಕ್ಕೆ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಸಹ ಧ್ವನಿಗೂಡಿಸಿದರು.

ಚಿದಾನಂದ ಮೂರ್ತಿ ಹಾಗೂ ಪ್ರಮೀಳಾ ನೇಸರ್ಗಿ ಅವರ ವಾದದಿಂದ ಸಿಟ್ಟಿಗೆದ್ದ ಕಾರ್ಯಕ್ರಮದ ಆಯೋಜಕರು, ಈ ಇಬ್ಬರನ್ನು ಬಲವಂತವಾಗಿ ಕಾರ್ಯಕ್ರಮದಿಂದ ಹೊರ ಹಾಕಿದ ಘನಟನೆ ನಡೆಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!