ಅಶುತೋಶ್ 
ಪ್ರಧಾನ ಸುದ್ದಿ

ಯಾದವ್ ಮತ್ತು ಭೂಷಣ್ ಜೊತೆ ಭಿನ್ನಮತೀಶ ಶಮನ ಸಾಧ್ಯತೆ ಕಡಿಮೆ: ಅಶುತೋಶ್

ಭಿನ್ನಮತೀಯ ಆಮ್ ಆದ್ಮಿ ಪಕ್ಷದ ನಾಯಕರಾದ ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರೊಂದಿಗೆ ಹೊಂದಾಣಿಕೆ ಸಾಧ್ಯತೆ ಅತ್ಯಲ್ಪ

ನವದೆಹಲಿ: ಭಿನ್ನಮತೀಯ ಆಮ್ ಆದ್ಮಿ ಪಕ್ಷದ ನಾಯಕರಾದ ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರೊಂದಿಗೆ ಹೊಂದಾಣಿಕೆ ಸಾಧ್ಯತೆ ಅತ್ಯಲ್ಪ ಎಂದಿದ್ದಾರೆ ಆಪ್ ಪಕ್ಷದ ಮತ್ತೊಬ್ಬ ನಾಯಕ ಅಶುತೋಶ್.

"ಪ್ರಾಮಾಣಿಕವಾಗಿ ಹೇಳಬೇಕೆಂದರ, ಹೊಂದಾಣಿಕೆಯ ಸಾಧ್ಯತೆ ಅತ್ಯಲ್ಪ ಏಕೆಂದರೆ ಅವರು (ಭೂಷಣ್ ಮತ್ತು ಯಾದವ್) ಕೇಜ್ರಿವಾಲ್ ಅವರನ್ನು ವಜಾ ಮಾಡುವಂತೆ(ರಾಷ್ಟ್ರೀಯ ಸಂಚಾಲಕ ಸ್ಥಾನದಿಂದ) ಬೇಡಿಕೆಯಿಟ್ಟಿದ್ದಾರೆ" ಎಂದು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ. "ನೀವು ಪಕ್ಷದ ಭಾಗವಾಗಿದ್ದರೆ, ಪಕ್ಷದ ನಾಯಕನನ್ನು ಒಪ್ಪಿಕೊಳ್ಳಬೇಕು" ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಅಧಿಕಾರಕ್ಕೆ ಬಂದು ಇನ್ನೂ ಎರಡು ತಿಂಗಳು ಕಳೆಯುವ ಮೊದಲೇ ಗುರುವಾರ ಪಕ್ಷದ ವಕ್ತಾರರು, ಹಿರಿಯ ನಾಯಕರಾದ ಯೋಗೆಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದಿದ್ದರು, ಆದರೆ ಈ ಇಬ್ಬರೂ ನಾಯಕರು ಇದನ್ನು ಅಲ್ಲಗೆಳೆದಿದ್ದರು.

ಈ ನಿಟ್ಟಿನಲ್ಲಿ ತಾರಕಕ್ಕೇರಿರುವ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಕ್ಕೆ ಯಾವುದೇ ಉಪಶಮನವಿದ್ದಂತೆ ಕಾಣುತ್ತಿಲ್ಲ ಆದುದರಿಂದ ಇಬ್ಭಾಗ ಅಭಾಧಿತ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT