ಅಶುತೋಶ್ 
ಪ್ರಧಾನ ಸುದ್ದಿ

ಯಾದವ್ ಮತ್ತು ಭೂಷಣ್ ಜೊತೆ ಭಿನ್ನಮತೀಶ ಶಮನ ಸಾಧ್ಯತೆ ಕಡಿಮೆ: ಅಶುತೋಶ್

ಭಿನ್ನಮತೀಯ ಆಮ್ ಆದ್ಮಿ ಪಕ್ಷದ ನಾಯಕರಾದ ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರೊಂದಿಗೆ ಹೊಂದಾಣಿಕೆ ಸಾಧ್ಯತೆ ಅತ್ಯಲ್ಪ

ನವದೆಹಲಿ: ಭಿನ್ನಮತೀಯ ಆಮ್ ಆದ್ಮಿ ಪಕ್ಷದ ನಾಯಕರಾದ ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರೊಂದಿಗೆ ಹೊಂದಾಣಿಕೆ ಸಾಧ್ಯತೆ ಅತ್ಯಲ್ಪ ಎಂದಿದ್ದಾರೆ ಆಪ್ ಪಕ್ಷದ ಮತ್ತೊಬ್ಬ ನಾಯಕ ಅಶುತೋಶ್.

"ಪ್ರಾಮಾಣಿಕವಾಗಿ ಹೇಳಬೇಕೆಂದರ, ಹೊಂದಾಣಿಕೆಯ ಸಾಧ್ಯತೆ ಅತ್ಯಲ್ಪ ಏಕೆಂದರೆ ಅವರು (ಭೂಷಣ್ ಮತ್ತು ಯಾದವ್) ಕೇಜ್ರಿವಾಲ್ ಅವರನ್ನು ವಜಾ ಮಾಡುವಂತೆ(ರಾಷ್ಟ್ರೀಯ ಸಂಚಾಲಕ ಸ್ಥಾನದಿಂದ) ಬೇಡಿಕೆಯಿಟ್ಟಿದ್ದಾರೆ" ಎಂದು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ. "ನೀವು ಪಕ್ಷದ ಭಾಗವಾಗಿದ್ದರೆ, ಪಕ್ಷದ ನಾಯಕನನ್ನು ಒಪ್ಪಿಕೊಳ್ಳಬೇಕು" ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಅಧಿಕಾರಕ್ಕೆ ಬಂದು ಇನ್ನೂ ಎರಡು ತಿಂಗಳು ಕಳೆಯುವ ಮೊದಲೇ ಗುರುವಾರ ಪಕ್ಷದ ವಕ್ತಾರರು, ಹಿರಿಯ ನಾಯಕರಾದ ಯೋಗೆಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದಿದ್ದರು, ಆದರೆ ಈ ಇಬ್ಬರೂ ನಾಯಕರು ಇದನ್ನು ಅಲ್ಲಗೆಳೆದಿದ್ದರು.

ಈ ನಿಟ್ಟಿನಲ್ಲಿ ತಾರಕಕ್ಕೇರಿರುವ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಕ್ಕೆ ಯಾವುದೇ ಉಪಶಮನವಿದ್ದಂತೆ ಕಾಣುತ್ತಿಲ್ಲ ಆದುದರಿಂದ ಇಬ್ಭಾಗ ಅಭಾಧಿತ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT