ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಮುಸ್ಲಿಮರು ದೇವಾಲಯ ಸ್ಥಾಪಿಸುವುದರ ವಿರುದ್ಧ ಫತ್ವಾ ಹೊರಡಿಸಿದ ಇಸ್ಲಾಮಿಕ್ ಸಂಘಟನೆ

ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರಿಗೆ ದೇವಾಲಯ ನಿರ್ಮಿಸಬೇಕೆಂದಿರುವ ಉತ್ತರ ಪ್ರದೇಶದ ಸಚಿವ ಅಜಮ್ ಖಾನ್ ಅವರ

ಲಕನೌ: ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರಿಗೆ ದೇವಾಲಯ ನಿರ್ಮಿಸಬೇಕೆಂದಿರುವ ಉತ್ತರ ಪ್ರದೇಶದ ಸಚಿವ ಅಜಮ್ ಖಾನ್ ಅವರ ಹೇಳಿಕೆಗೆ ಅಡ್ಡಿಯಾಗಿ ಪರಿಣಮಿಸಿರುವ ಇಸ್ಲಾಮಿಕ್ ಸಂಘಟನೆಯೊಂದು ಮುಸ್ಲಿಮನೊಬ್ಬನ  ಈ ನಡೆ ಇಸ್ಲಾಂ ವಿರೋಧಿ ಮತ್ತು 'ನ್ಯಾಯಬಾಹಿರ' ಎಂದು ಫತ್ವಾ ಹೊರಡಿಸಿದ್ದಾರೆ.

"ಇಸ್ಲಾಂನಲ್ಲಿ ಅಲ್ಲಾಹುನನ್ನು ಹೊರತುಪಡಿಸಿ ಬೇರೆಯವರನ್ನು ನಂಬುವುದು ನ್ಯಾಯಬಾಹಿರ ಮತ್ತು ದೇವಾಲಯವನ್ನು ಕಟ್ಟುವುದು ಕೂಡ ಅಷ್ಟೇ ತಪ್ಪು" ಎಂದು ಮಾದರಸ ಮಂಜರ್ ಎ ಇಸ್ಲಾಂ ತಿಳಿಸಿದೆ.

"ದೇವಾಲಯವನ್ನು ಕಟ್ಟುವ ಮುಸ್ಲಿಂ ಚಟುವಟಿಕೆಗಳು ಸರಿಯಲ್ಲ. ಅವನು ಅಪರಾಧಿ ಮತ್ತು ಅವನ್ನು ಶಿಕ್ಷಿಸಲಾಗುತ್ತದೆ. ಅವನಿಗೆ ಪತ್ನಿಯಿದ್ದರೆ ವಿಷಾದ ವ್ಯಕ್ತಪಡಿಸಿ ಅವರನ್ನು ಮತ್ತೆ ಮದುವೆಯಾಗಬೇಕಾಗುತ್ತದೆ." ಎಂದು ಮದರಸಾದ ಫತ್ವಾ ಇಲಾಖೆ ತಿಳಿಸಿದೆ.

"ನಾನು ನೇತಾಜಿ (ಮುಲಾಯಂ) ಅವರ ಮುಂದೆ ಅವರ ದೇವಾಲಯ ನಿರ್ಮಿಸಲು ನನ್ನ ಪ್ರಸ್ತಾವನೆ ಸಲ್ಲಿಸುತ್ತೇನೆ. ಅವರು ಅನುಮತಿ ನೀಡಿದರೆ ಅದನ್ನು ನಿರ್ಮಿಸಲಾಗುವುದು" ಎಂದು ಅಜಮ್ ಫೆಬ್ರವರಿ ೧೨ ರಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT