ಮೋಹನ್ ಭಾಗವತ್ 
ಪ್ರಧಾನ ಸುದ್ದಿ

ಒಳ್ಳೆಯ ಸಮಾಜಕ್ಕಾಗಿ ನೈತಿಕ ಶಿಕ್ಷಣ ಅಗತ್ಯ: ಆರ್ ಎಸ್ ಎಸ್ ಮುಖಂಡ

ಲೌಖಿಕ ಗೆಲುವಿನಿಂದ ಗಳಿಸಿದ ಆಸ್ತಿ-ಪಾಸ್ತಿಯಿಂದ ಜನರು ಸ್ವಾರ್ಥಿಗಳಾಗುತ್ತಿದ್ದಾರೆ ಎಂದಿರುವ ಆರ್ ಎಸ್ ಎಸ್ ಅಧ್ಯಕ್ಷ ಮೋಹನ್ ಭಾಗವತ್

ಕಿಶನ್ಗಂಜ್: ಲೌಖಿಕ ಗೆಲುವಿನಿಂದ ಗಳಿಸಿದ ಆಸ್ತಿ-ಪಾಸ್ತಿಯಿಂದ ಜನರು ಸ್ವಾರ್ಥಿಗಳಾಗುತ್ತಿದ್ದಾರೆ ಎಂದಿರುವ ಆರ್ ಎಸ್ ಎಸ್ ಅಧ್ಯಕ್ಷ ಮೋಹನ್ ಭಾಗವತ್ ಜೀವಿಸಲು ಯೋಗ್ಯವಾದ ಸಮಾಜ ಕಟ್ಟಲು ನೈತಿಕ ಶಿಕ್ಷಣ ಅಗತ್ಯ ಎಂದಿದ್ದಾರೆ.

"ಲೌಖಿಕದ ಗೆಲುವಿನಿಂದ ಹೆಚ್ಚೆಚ್ಚು ಅಸ್ತಿ ಗಳಿಸಿ ಜನ ಸ್ವಾರ್ಥಿಗಳಾಗಿದ್ದಾರೆ. ಈ ಸ್ವಾರ್ಥದಿಂದ ಜನರು ಎಲ್ಲಿಗೆ ಹೋಗಿದ್ದಾರೆಂದರೆ ಪ್ರಾಣಿಗಳು ಮತ್ತು ಮನುಷ್ಯರ ನಡುವೆ ವ್ಯತ್ಯಾಸವೇ ಇಲ್ಲದಂತಾಗಿದೆ" ಎಂದು ಕಿಶನ್ಗಂಜ್ ನ ಕಾಲೇಜು ಉದ್ಘಾಟನಾ ಸಮಾರಂಭವೊಂದರಲ್ಲಿ ತಿಳಿಸಿದ್ದಾರೆ.

"ತನ್ನನ್ನು ಉತ್ತಮವಾಗಿಸಿಕೊಳ್ಳುವ ಹಾಗೂ ಸಮಾಜವನ್ನು ಉತ್ತಮಗೊಳಿಸುವಂತಹ ಶಿಕ್ಷಣವನ್ನು ತೆಗೆದುಕೊಳ್ಳುವುದು ಪ್ರತಿಯೊಬ್ಬನ ಕರ್ತವ್ಯ" ಎಂದಿದ್ದಾರೆ ಮೋಹನ್.

ಪರಿಸರದ ಕಾಳಜಿಯ ಬಗ್ಗೆಯೂ ಮಾತನಾಡಿದ ಭಾಗವತ್ ಅಭಿವೃದ್ಧಿಯ ನೆಪದಲ್ಲಿ ಪರಿಸರದ ಜೊತೆಗಿನ ಸಂಘರ್ಷವನ್ನು ಕಡಿಮೆ ಮಾಡುವ ಸೂಕ್ಷ್ಮತೆ ಬೆಳೆಸಿಕೊಳ್ಳಬೇಕು ಎಂದು ಕರೆ ಕೊಟ್ಟಿದ್ದಾರೆ.

"ಅಭಿವೃದ್ಧಿ ಮತ್ತು ಪರಿಸರದ ಮಧ್ಯೆ ಸಂಘರ್ಷ ಮುಂದುವರೆದಿದೆ" ಎಂದು ಭಾಗವತ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT