ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ದೆಹಲಿಯಲ್ಲಿ ಉಗಾಂಡ ಮಹಿಳೆಯ ರೇಪ್ ಪ್ರಕರಣ: ಇಬ್ಬರಿಗೆ ೩೦ ವರ್ಷ ಸಜೆ

ಉಗಾಂಡ ಮಹೆಳೆಯೊಬ್ಬಳನ್ನು ಅಪಹರಿಸಿ ಗ್ಯಾಂಗ್ ರೇಪ್ ಮಾಡಿದ ಪ್ರಕರಣದಲ್ಲಿ ತಪ್ಪಿತಸ್ಥರಾದ ಇಬ್ಬರಿಗೆ ೩೦ ವರ್ಷ ಜೈಲು ಸಜೆ ನೀಡಿ ದೆಹಲಿ ಕೋರ್ಟ್

ನವದೆಹಲಿ: ಉಗಾಂಡ ಮಹಿಳೆಯೊಬ್ಬಳನ್ನು ಅಪಹರಿಸಿ ಗ್ಯಾಂಗ್ ರೇಪ್ ಮಾಡಿದ ಪ್ರಕರಣದಲ್ಲಿ ತಪ್ಪಿತಸ್ಥರಾದ ಇಬ್ಬರಿಗೆ ೩೦ ವರ್ಷ ಜೈಲು ಸಜೆ ನೀಡಿ ದೆಹಲಿ ಕೋರ್ಟ್ ತೀರ್ಪು ಪ್ರಕಟಿಸಿದೆ. "ಅವರ ಈ ಕೆಲಸ ವಿಶ್ವದ ಮುಂದೆ ಭಾರತವನ್ನು ಅವಹೇಳನ ಮಾಡಿದೆ" ಎಂದಿರುವ ನ್ಯಾಯಧೀಶರು ಇಬ್ಬರೂ ಕಠಿಣ ಸಜೆಗೆ ಅರ್ಹರು ಎಂದಿದ್ದಾರೆ.

ದೆಹಲಿ ನಿವಾಸಿಗಳಾದ ರಾಜ್ ಕುಮಾರ್ ಮತ್ತು ದಿನೇಶ್ ಶರ್ಮ ಅವರಿಗೆ ೫೦ ಸಾವಿರ ದಂಡವನ್ನೂ ವಿಧಿಸಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿರೇಂದರ್ ಭಟ್ "ಒಬ್ಬಳೇ ವಿದೇಶಿ ಯುವತಿ, ತಡರಾತ್ರಿಯಲ್ಲಿ ನಡೆದು ಹೋಗುತ್ತಿರುವಾಗ ತೋಳಗಳ ತರಹ ಈ ತಪ್ಪಿತಸ್ಥರು ಹುಡುಗಿಯನ್ನು ಅಪಹರಿಸಿದ್ದಾರೆ" ಎಂದಿದ್ದಾರೆ.

"ವಿದೇಶಿ ಮಹಿಳೆಯನ್ನು ತಮ್ಮ ಗುರಿಯಾಗಿಸಿಕೊಂಡಿರುವ ಇವರಿಗೆ ದೇಶದ ಘನತೆ ಮಾತು ಗೌರವದ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ತೋರಿಸಿದ್ದಾರೆ. ಅವರ ಈ ಕೆಲಸ ವಿಶ್ವದ ಮುಂದೆ ಭಾರತವನ್ನು ಅವಹೇಳನ ಮಾಡಿದೆ. ಇಂತಹ ಘಟನೆಗಳು ದೇಶಕ್ಕೆ ಕೆಟ್ಟ ಹೆಸರು ತರುತ್ತದೆ" ಎಂದು ನ್ಯಾಯಾಧೀಶ ಹೇಳಿದ್ದಾರೆ.

ಈ ಕೃತ್ಯವನ್ನು ಎಷ್ಟು ಹೀನಾಯವಾಗಿ ಎಸಗಿದ್ದಾರೆ ಎಂದರೆ "ಮಹಿಳೆಯ ಘನತೆ ಮತ್ತು ಗೌರವದ ಮೇಲೂ ಕಿಂಚಿತ್ತು ಚಿಂತೆಯಿಲ್ಲ ಅವರಿಗೆ ಎಂಬುದನ್ನು ತೋರಿಸುತ್ತದೆ" ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT