ಗಲಭೆಗೆ ಒಳಗಾಗಿರುವ ಯೆಮನ್ 
ಪ್ರಧಾನ ಸುದ್ದಿ

ಯೆಮನ್ ನಿಂದ ರಕ್ಷಣೆಗೊಳಗಾದ ೩೪೯ ಭಾರತೀಯರು ಜಿಬೂಟಿಗೆ ಆಗಮನ

ಯುದ್ಧದ ಗಲಭೆಗೆ ಒಳಗಾಗಿರುವ ಯೆಮನ್ ನ ಆಡೆನ್ ನಗರದಿಂದ ಕಳೆದ ರಾತ್ರಿ ಭಾರತೀಯ ಯುದ್ಧ ನೌಕೆ ರಕ್ಷಿಸಿರುವ ೩೪೯ ಜನ ಭಾರತೀಯರು ಇಂದು

ನವದೆಹಲಿ: ಯುದ್ಧದ ಗಲಭೆಗೆ ಒಳಗಾಗಿರುವ ಯೆಮನ್ ನ ಆಡೆನ್ ನಗರದಿಂದ ಕಳೆದ ರಾತ್ರಿ ಭಾರತೀಯ ಯುದ್ಧ ನೌಕೆ ರಕ್ಷಿಸಿರುವ ೩೪೯ ಜನ ಭಾರತೀಯರು ಇಂದು ಜಿಬೂಟಿಗೆ ಬಂದಿಳಿದಿದ್ದು, ಶೀಘ್ರದಲ್ಲೆ ಮುಂಬೈಗೆ ಹಾರಲಿದ್ದಾರೆ.

ಐ ಎನ್ ಎಸ ಸುಮಿತ್ರಾ ಹಡಗಿಗೆ ಆಡೆನ್ ಬಂದರಿಗೆ ತೆರಳುವ ಅನುಮತಿ ಸಿಕ್ಕ ಕೂಡಲೆ ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಿ ೩೪೯ ಭಾರತೀಯರನ್ನು ರಕ್ಷಿಸಲಾಗಿದೆ. ಯೆಮನ್ ನಲ್ಲಿ ಸಿಲುಕಿರುವ ೪೦೦೦ ಭಾರತೀಯರನ್ನು ರಕ್ಷಿಸಲು ವೈಮಾನಿಕ ಮತ್ತು ಸಮುದ್ರದ ಮೂಲಕ ಭಾರಿ ರಕ್ಷಣಾ ಕಾರ್ಯಾಚರಣೆಯನ್ನು ಭಾರತ ಕೈಗೊಂಡಿದೆ. ಇದನ್ನು 'ಆಪರೇಶನ್ ರಾಹತ್' ಎಂದು ಹೆಸರಿಸಲಾಗಿದೆ.

ಆಡೆನ್ ಗಲ್ಫ್ ನಲ್ಲಿ ಕಡಲ್ಗಳ್ಳರ ಪರಿವೀಕ್ಷಣೆಗೆ ಇರಿಸಲಾಗಿರುವ ಐ ಎನ್ ಎಸ್ ಸುಮಿತ್ರ ಹಡಗು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದ ಮೊದಲ ಹಡಗು.

೩೪೯ ಜನರು ಈಗ ಸುರಕ್ಷಿತವಾಗಿ ಜೆಬೂಟಿಯಲ್ಲಿ ಇಳಿದಿರುವ ಹಿನ್ನಲೆಯಲ್ಲಿ, ಐ ಎನ್ ಎಸ್ ಸುಮಿತ್ರ ಮತ್ತೆ ಆಡೆನ್ ಬಂದರಿಗೆ ಹಿಂದಿರುಗಲಿದೆ. ವೈಮಾನಿಕ ದಾಳಿಯಿಂದ ಯುದ್ಧದ ತೀವ್ರತೆ ಹೆಚ್ಚಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಹಿನ್ನಡೆಯಾಗಿದ್ದು, ಸ್ವಲ್ಪ ತಡವಾಗುತ್ತಿದೆ ಎನ್ನಲಾಗಿದೆ.

ಹಡಗು ಜಿಬೂಟಿ ತಲುಪಿರುವ ಹಿನ್ನಲೆಯಲ್ಲಿ ರಕ್ಷಣೆಯ ಉಸ್ತುವಾರಿ ಹೊತ್ತಿರುವ ರಕ್ಷಣಾ ಸಚಿವಾಲಯದ ರಾಜ್ಯ ಮಂತ್ರಿ ವಿ ಕೆ ಸಿಂಗ್ ರಕ್ಷಣೆಗೊಳಗಾದ ಭಾರತೀಯರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT