ಗಲಭೆಗೆ ಒಳಗಾಗಿರುವ ಯೆಮನ್ 
ಪ್ರಧಾನ ಸುದ್ದಿ

ಯೆಮನ್ ನಿಂದ ರಕ್ಷಣೆಗೊಳಗಾದ ೩೪೯ ಭಾರತೀಯರು ಜಿಬೂಟಿಗೆ ಆಗಮನ

ಯುದ್ಧದ ಗಲಭೆಗೆ ಒಳಗಾಗಿರುವ ಯೆಮನ್ ನ ಆಡೆನ್ ನಗರದಿಂದ ಕಳೆದ ರಾತ್ರಿ ಭಾರತೀಯ ಯುದ್ಧ ನೌಕೆ ರಕ್ಷಿಸಿರುವ ೩೪೯ ಜನ ಭಾರತೀಯರು ಇಂದು

ನವದೆಹಲಿ: ಯುದ್ಧದ ಗಲಭೆಗೆ ಒಳಗಾಗಿರುವ ಯೆಮನ್ ನ ಆಡೆನ್ ನಗರದಿಂದ ಕಳೆದ ರಾತ್ರಿ ಭಾರತೀಯ ಯುದ್ಧ ನೌಕೆ ರಕ್ಷಿಸಿರುವ ೩೪೯ ಜನ ಭಾರತೀಯರು ಇಂದು ಜಿಬೂಟಿಗೆ ಬಂದಿಳಿದಿದ್ದು, ಶೀಘ್ರದಲ್ಲೆ ಮುಂಬೈಗೆ ಹಾರಲಿದ್ದಾರೆ.

ಐ ಎನ್ ಎಸ ಸುಮಿತ್ರಾ ಹಡಗಿಗೆ ಆಡೆನ್ ಬಂದರಿಗೆ ತೆರಳುವ ಅನುಮತಿ ಸಿಕ್ಕ ಕೂಡಲೆ ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಿ ೩೪೯ ಭಾರತೀಯರನ್ನು ರಕ್ಷಿಸಲಾಗಿದೆ. ಯೆಮನ್ ನಲ್ಲಿ ಸಿಲುಕಿರುವ ೪೦೦೦ ಭಾರತೀಯರನ್ನು ರಕ್ಷಿಸಲು ವೈಮಾನಿಕ ಮತ್ತು ಸಮುದ್ರದ ಮೂಲಕ ಭಾರಿ ರಕ್ಷಣಾ ಕಾರ್ಯಾಚರಣೆಯನ್ನು ಭಾರತ ಕೈಗೊಂಡಿದೆ. ಇದನ್ನು 'ಆಪರೇಶನ್ ರಾಹತ್' ಎಂದು ಹೆಸರಿಸಲಾಗಿದೆ.

ಆಡೆನ್ ಗಲ್ಫ್ ನಲ್ಲಿ ಕಡಲ್ಗಳ್ಳರ ಪರಿವೀಕ್ಷಣೆಗೆ ಇರಿಸಲಾಗಿರುವ ಐ ಎನ್ ಎಸ್ ಸುಮಿತ್ರ ಹಡಗು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದ ಮೊದಲ ಹಡಗು.

೩೪೯ ಜನರು ಈಗ ಸುರಕ್ಷಿತವಾಗಿ ಜೆಬೂಟಿಯಲ್ಲಿ ಇಳಿದಿರುವ ಹಿನ್ನಲೆಯಲ್ಲಿ, ಐ ಎನ್ ಎಸ್ ಸುಮಿತ್ರ ಮತ್ತೆ ಆಡೆನ್ ಬಂದರಿಗೆ ಹಿಂದಿರುಗಲಿದೆ. ವೈಮಾನಿಕ ದಾಳಿಯಿಂದ ಯುದ್ಧದ ತೀವ್ರತೆ ಹೆಚ್ಚಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಹಿನ್ನಡೆಯಾಗಿದ್ದು, ಸ್ವಲ್ಪ ತಡವಾಗುತ್ತಿದೆ ಎನ್ನಲಾಗಿದೆ.

ಹಡಗು ಜಿಬೂಟಿ ತಲುಪಿರುವ ಹಿನ್ನಲೆಯಲ್ಲಿ ರಕ್ಷಣೆಯ ಉಸ್ತುವಾರಿ ಹೊತ್ತಿರುವ ರಕ್ಷಣಾ ಸಚಿವಾಲಯದ ರಾಜ್ಯ ಮಂತ್ರಿ ವಿ ಕೆ ಸಿಂಗ್ ರಕ್ಷಣೆಗೊಳಗಾದ ಭಾರತೀಯರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT