ಗಲಭೆಗೆ ಒಳಗಾಗಿರುವ ಯೆಮನ್ 
ಪ್ರಧಾನ ಸುದ್ದಿ

ಯೆಮನ್ ನಿಂದ ರಕ್ಷಣೆಗೊಳಗಾದ ೩೪೯ ಭಾರತೀಯರು ಜಿಬೂಟಿಗೆ ಆಗಮನ

ಯುದ್ಧದ ಗಲಭೆಗೆ ಒಳಗಾಗಿರುವ ಯೆಮನ್ ನ ಆಡೆನ್ ನಗರದಿಂದ ಕಳೆದ ರಾತ್ರಿ ಭಾರತೀಯ ಯುದ್ಧ ನೌಕೆ ರಕ್ಷಿಸಿರುವ ೩೪೯ ಜನ ಭಾರತೀಯರು ಇಂದು

ನವದೆಹಲಿ: ಯುದ್ಧದ ಗಲಭೆಗೆ ಒಳಗಾಗಿರುವ ಯೆಮನ್ ನ ಆಡೆನ್ ನಗರದಿಂದ ಕಳೆದ ರಾತ್ರಿ ಭಾರತೀಯ ಯುದ್ಧ ನೌಕೆ ರಕ್ಷಿಸಿರುವ ೩೪೯ ಜನ ಭಾರತೀಯರು ಇಂದು ಜಿಬೂಟಿಗೆ ಬಂದಿಳಿದಿದ್ದು, ಶೀಘ್ರದಲ್ಲೆ ಮುಂಬೈಗೆ ಹಾರಲಿದ್ದಾರೆ.

ಐ ಎನ್ ಎಸ ಸುಮಿತ್ರಾ ಹಡಗಿಗೆ ಆಡೆನ್ ಬಂದರಿಗೆ ತೆರಳುವ ಅನುಮತಿ ಸಿಕ್ಕ ಕೂಡಲೆ ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಿ ೩೪೯ ಭಾರತೀಯರನ್ನು ರಕ್ಷಿಸಲಾಗಿದೆ. ಯೆಮನ್ ನಲ್ಲಿ ಸಿಲುಕಿರುವ ೪೦೦೦ ಭಾರತೀಯರನ್ನು ರಕ್ಷಿಸಲು ವೈಮಾನಿಕ ಮತ್ತು ಸಮುದ್ರದ ಮೂಲಕ ಭಾರಿ ರಕ್ಷಣಾ ಕಾರ್ಯಾಚರಣೆಯನ್ನು ಭಾರತ ಕೈಗೊಂಡಿದೆ. ಇದನ್ನು 'ಆಪರೇಶನ್ ರಾಹತ್' ಎಂದು ಹೆಸರಿಸಲಾಗಿದೆ.

ಆಡೆನ್ ಗಲ್ಫ್ ನಲ್ಲಿ ಕಡಲ್ಗಳ್ಳರ ಪರಿವೀಕ್ಷಣೆಗೆ ಇರಿಸಲಾಗಿರುವ ಐ ಎನ್ ಎಸ್ ಸುಮಿತ್ರ ಹಡಗು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದ ಮೊದಲ ಹಡಗು.

೩೪೯ ಜನರು ಈಗ ಸುರಕ್ಷಿತವಾಗಿ ಜೆಬೂಟಿಯಲ್ಲಿ ಇಳಿದಿರುವ ಹಿನ್ನಲೆಯಲ್ಲಿ, ಐ ಎನ್ ಎಸ್ ಸುಮಿತ್ರ ಮತ್ತೆ ಆಡೆನ್ ಬಂದರಿಗೆ ಹಿಂದಿರುಗಲಿದೆ. ವೈಮಾನಿಕ ದಾಳಿಯಿಂದ ಯುದ್ಧದ ತೀವ್ರತೆ ಹೆಚ್ಚಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಹಿನ್ನಡೆಯಾಗಿದ್ದು, ಸ್ವಲ್ಪ ತಡವಾಗುತ್ತಿದೆ ಎನ್ನಲಾಗಿದೆ.

ಹಡಗು ಜಿಬೂಟಿ ತಲುಪಿರುವ ಹಿನ್ನಲೆಯಲ್ಲಿ ರಕ್ಷಣೆಯ ಉಸ್ತುವಾರಿ ಹೊತ್ತಿರುವ ರಕ್ಷಣಾ ಸಚಿವಾಲಯದ ರಾಜ್ಯ ಮಂತ್ರಿ ವಿ ಕೆ ಸಿಂಗ್ ರಕ್ಷಣೆಗೊಳಗಾದ ಭಾರತೀಯರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT