ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಆಂಧ್ರದಲ್ಲಿ ಮತ್ತಿಬ್ಬರು ಆದಿವಾಸಿಗಳನ್ನು ಕೊಂದ ಮಾವೋವಾದಿಗಳು

ಪೊಲೀಸರಿಗೆ ಮಾಹಿತಿದಾರರಾಗಿದ್ದರು ಎಂಬ ಶಂಕೆಯ ಮೇಲೆ ಇನ್ನಿಬ್ಬರು ಆದಿವಾಸಿಗಳನ್ನು ಮಾವೋವಾದಿಗಳು ಆಂಧ್ರ ಪ್ರದೇಶದಲ್ಲಿ ಗುಂಡಿಕ್ಕಿ ಕೊಂದ

ಹೈದರಾಬಾದ್: ಪೊಲೀಸರಿಗೆ ಮಾಹಿತಿದಾರರಾಗಿದ್ದರು ಎಂಬ ಶಂಕೆಯ ಮೇಲೆ ಇನ್ನಿಬ್ಬರು ಆದಿವಾಸಿಗಳನ್ನು ಮಾವೋವಾದಿಗಳು ಆಂಧ್ರ ಪ್ರದೇಶದಲ್ಲಿ ಗುಂಡಿಕ್ಕಿ ಕೊಂದ ಘಟನೆ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾವೋವಾದಿಗಳ) ಬಣಕ್ಕೆ ಸೇರಿದ ಇಬ್ಬರು ತೀವ್ರವಾದಿಗಳು ಪೂರ್ವ ಗೋದಾವರಿಯ ಬುರಕಾವಕೋಟ ಗ್ರಾಮದಲ್ಲಿ ಇಬ್ಬರನ್ನು ಭಾನುವಾರ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಿಷೇಧಿತ ಸಂಘಟನೆ ಬಿಟ್ಟು ಹೋಗಿರುವ ಪತ್ರದಲ್ಲಿ, ಈ ಇಬ್ಬರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೆ ಮಾಹಿತಿದಾರರಾಗಿ ಜನಗಳಿಂದ ದುಡ್ಡು ಕೀಳುತ್ತಿದ್ದರು ಎಂದು ಬರೆಯಲಾಗಿದೆ.

ಕೂಡಲೆ ಗ್ರಾಮಕ್ಕೆ ತೆರಳಿದ ಪೊಲೀಸರು ಮೃತ ದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಕಳೆದ ವಾರ ಮಾವೋವಾದಿಗಳು ಇದೇ ಜಿಲ್ಲೆಯಿಂದ ಇಬ್ಬರು ಆದಿವಾಸಿ ಯುವಕರನ್ನು ಅಪಹರಿಸಿ ಕೊಂದಿದ್ದರು. ಈ ಘಟನೆ ಯೆಟಪಾಕ ಮಂಡಲದ ಕಮನಥೋಗು ಗ್ರಾಮದಲ್ಲಿ ನಡೆದಿತ್ತು

ಚತ್ತೀಸ್ ಘರ್ ನ ಗಡಿಯಲ್ಲಿರುವ ವಿಶಾಖಪಟ್ಟಣ ಮತ್ತು ಪೂರ್ವ ಗೋದಾವರಿ ಪ್ರದೇಶಗಳು ನಕ್ಸಲ್ ಪೀಡಿತ ಪ್ರದೇಶಗಳು. ಪೊಲೀಸ್ ಮಾಹಿತಿದಾರರೆಂದು ಶಂಕಿಸಿ ನಕ್ಸಲರು ಹಲವಾರು ಆದಿವಾಸಿಗಳನ್ನು ಮತ್ತು ಗ್ರಾಮಸ್ಥರನ್ನು ಈ ಭಾಗದಲ್ಲಿ ಕೊಂದುಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮ ಮಂದಿರ ಲೂಟಿ ದುರದೃಷ್ಟಕರ; ಇದನ್ನು ಬಳಸಿಕೊಂಡು ಹಿಂದೂ ಧರ್ಮವನ್ನು ಕೆಣಕಲು ಯತ್ನ: ಕೊನೆಗೂ ಮೌನ ಮುರಿದ RSS

ಹತ್ಯೆಯಾಗಿ 4 ತಿಂಗಳ ಬಳಿಕ ಖಮೇನಿ ಅಂತ್ಯಕ್ರಿಯೆಗೆ ಇರಾನ್ ಸಿದ್ಧತೆ: ಶವಪೆಟ್ಟಿಗೆ ಪ್ರದರ್ಶನ; ಇಷ್ಟು ದಿನ ಎಲ್ಲಿತ್ತು ಶರೀರ?

ತಮ್ಮನ ಮದುವೆಯ ಖುಷಿಯಲ್ಲಿದ್ದಾಗಲೇ ಮನೆಗೆ ನುಗ್ಗಿ ಪುನೀತ್ ಕೆರೆಹಳ್ಳಿ ಬಂಧಿಸಿದ ಪೊಲೀಸರು!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಸುಪ್ರೀಂ ಕೋರ್ಟ್ ಶಾಕ್‌; ʻದಾಸʼನಿಗೆ 1 ವರ್ಷ ಜೈಲೇ ಗತಿ!

Video: ಬೀದಿ ಬದಿ ವ್ಯಾಪಾರಿಗಳಿಗೆ ಅನ್ಯಾಯವಾಗಲು ಬಿಡಲ್ಲ, ಪಾದಚಾರಿಗಳ ಜೀವರಕ್ಷಣೆ ಸರ್ಕಾರದ ಜವಾಬ್ದಾರಿ: ಸಚಿವ ಕೃಷ್ಣ ಬೈರೇಗೌಡ