ಮುನಿರತ್ನ 
ಪ್ರಧಾನ ಸುದ್ದಿ

ಮುನಿರತ್ನ ವಿರುದ್ಧ ಎಫ್‌ಐಆರ್, ಬಿಬಿಎಂಪಿ ಎಂಜಿನಿಯರ್ ಬಂಧನ

ಹಳೇ ಕಾಮಗಾರಿಗೆ ಯೋಜನಾ ವರದಿ ಸಲ್ಲಿಸಿ ಹಣ ಲಪಟಾಯಿಸಲು ಯತ್ನಿಸಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ವಿರುದ್ಧ...

ಬೆಂಗಳೂರು: ಹಳೇ ಕಾಮಗಾರಿಗೆ ಯೋಜನಾ ವರದಿ ಸಲ್ಲಿಸಿ ಹಣ ಲಪಟಾಯಿಸಲು ಯತ್ನಿಸಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದು, ಬಿಬಿಎಂಪಿ ಎಂಜಿನಯರ್ ಒಬ್ಬರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

2014-15ನೇ ಸಾಲಿನಲ್ಲಿ ನಗರಾಭಿವೃದ್ಧಿ ಯೋಜನೆ ಅನ್ವಯ ಬಿಬಿಎಂಪಿ ಎಂಜಿನಿಯರ್ ಹಾಗೂ ಅಧಿಕಾರಿಗಳು ಪೂರ್ಣವಾಗಿರುವ ಕಾಮಗಾರಿಗಳನ್ನು ನಡೆಯಬೇಕಿರುವ ಯೋಜನೆಗಳಲ್ಲಿ ಸೇರ್ಪಡೆ ಮಾಡಿದ್ದರು. ಅದರಲ್ಲಿ ಶಾಸಕ ಮುನಿರತ್ನ ಅವರ ನಿರ್ದೇಶನದಂತೆ ಯೋಜನಾ ಪಟ್ಟಿ ಸಿದ್ಧಪಡಿಸಲಾಗಿತ್ತು ಎಂದು ನಮೂದಿಸಿದ್ದರು. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.

ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರು 1ನೇ ಆರೋಪಿಯಾಗಿದ್ದು, ಯೋಜನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯ್ ಕುಮಾರ್ ಅವರು 2ನೇ ಆರೋಪಿಯಾಗಿದ್ದಾರೆ. ಎಫ್‌ಐಆರ್‌ನಲ್ಲಿ ಇನ್ನು ಇತರ ಆರೋಪಿಗಳು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೋಮವಾರವೇ ಬಿಬಿಎಂಪಿ ಕಚೇರಿಯನ್ನು ಪರಿಶೀಲಿಸಿದ್ದರು. ಈ ವೇಳೆ ವಿಜಯ್ ಕುಮಾರ್ ಅವರಿಂದ 45 ಕೋಟಿ ಮೊತ್ತದ ಸಲ್ಲಿಕೆಯಾಗಬೇಕಿರುವ ಉದ್ದೇಶಿತ ಯೋಜನೆಗಳ ದಾಖಲೆಗಳು ಸಿಕ್ಕಿವೆ.

ಪ್ರಾಥಮಿಕ ತನಿಖೆವೇಳೆ ಉದ್ದೇಶಿತ ಕೆಲಸಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಯೋಜನೆಯಲ್ಲಿ ಶೇ.20ರಷ್ಟು ಕೆಲಸ ಮುಕ್ತಾಯಗೊಂಡಿವೆ. ಈ ಕಾಮಗಾರಿ ಮೊತ್ತ ಸುಮಾರು 8ರಿಂದ 9ಕೋಟಿ ರುಪಾಯಿ ಎಂದು ಅಂದಾಜಿಸಲಾಗಿದೆ. ಬಹುತೇಕ ಕಮಗಾರಿಗಳು ನೀರಿಗೆ ಸಂಬಂಧಿಸಿದ್ದವು ಎಂದು ಹೇಳಲಾಗಿದೆ.

ಲೋಕಾಯುಕ್ತ ಪೊಲೀಸರು ಮಂಗಳವಾರ ಎಂಜಿನಿಯರ್ ವಿಜಯ್ ಕುಮಾರ್ ಅವರನ್ನು ಬಂಧಿಸಿ, ಲೋಕಾಯುಕ್ತ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT