ಮುನಿರತ್ನ 
ಪ್ರಧಾನ ಸುದ್ದಿ

ಮುನಿರತ್ನ ವಿರುದ್ಧ ಎಫ್‌ಐಆರ್, ಬಿಬಿಎಂಪಿ ಎಂಜಿನಿಯರ್ ಬಂಧನ

ಹಳೇ ಕಾಮಗಾರಿಗೆ ಯೋಜನಾ ವರದಿ ಸಲ್ಲಿಸಿ ಹಣ ಲಪಟಾಯಿಸಲು ಯತ್ನಿಸಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ವಿರುದ್ಧ...

ಬೆಂಗಳೂರು: ಹಳೇ ಕಾಮಗಾರಿಗೆ ಯೋಜನಾ ವರದಿ ಸಲ್ಲಿಸಿ ಹಣ ಲಪಟಾಯಿಸಲು ಯತ್ನಿಸಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದು, ಬಿಬಿಎಂಪಿ ಎಂಜಿನಯರ್ ಒಬ್ಬರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

2014-15ನೇ ಸಾಲಿನಲ್ಲಿ ನಗರಾಭಿವೃದ್ಧಿ ಯೋಜನೆ ಅನ್ವಯ ಬಿಬಿಎಂಪಿ ಎಂಜಿನಿಯರ್ ಹಾಗೂ ಅಧಿಕಾರಿಗಳು ಪೂರ್ಣವಾಗಿರುವ ಕಾಮಗಾರಿಗಳನ್ನು ನಡೆಯಬೇಕಿರುವ ಯೋಜನೆಗಳಲ್ಲಿ ಸೇರ್ಪಡೆ ಮಾಡಿದ್ದರು. ಅದರಲ್ಲಿ ಶಾಸಕ ಮುನಿರತ್ನ ಅವರ ನಿರ್ದೇಶನದಂತೆ ಯೋಜನಾ ಪಟ್ಟಿ ಸಿದ್ಧಪಡಿಸಲಾಗಿತ್ತು ಎಂದು ನಮೂದಿಸಿದ್ದರು. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.

ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರು 1ನೇ ಆರೋಪಿಯಾಗಿದ್ದು, ಯೋಜನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯ್ ಕುಮಾರ್ ಅವರು 2ನೇ ಆರೋಪಿಯಾಗಿದ್ದಾರೆ. ಎಫ್‌ಐಆರ್‌ನಲ್ಲಿ ಇನ್ನು ಇತರ ಆರೋಪಿಗಳು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೋಮವಾರವೇ ಬಿಬಿಎಂಪಿ ಕಚೇರಿಯನ್ನು ಪರಿಶೀಲಿಸಿದ್ದರು. ಈ ವೇಳೆ ವಿಜಯ್ ಕುಮಾರ್ ಅವರಿಂದ 45 ಕೋಟಿ ಮೊತ್ತದ ಸಲ್ಲಿಕೆಯಾಗಬೇಕಿರುವ ಉದ್ದೇಶಿತ ಯೋಜನೆಗಳ ದಾಖಲೆಗಳು ಸಿಕ್ಕಿವೆ.

ಪ್ರಾಥಮಿಕ ತನಿಖೆವೇಳೆ ಉದ್ದೇಶಿತ ಕೆಲಸಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಯೋಜನೆಯಲ್ಲಿ ಶೇ.20ರಷ್ಟು ಕೆಲಸ ಮುಕ್ತಾಯಗೊಂಡಿವೆ. ಈ ಕಾಮಗಾರಿ ಮೊತ್ತ ಸುಮಾರು 8ರಿಂದ 9ಕೋಟಿ ರುಪಾಯಿ ಎಂದು ಅಂದಾಜಿಸಲಾಗಿದೆ. ಬಹುತೇಕ ಕಮಗಾರಿಗಳು ನೀರಿಗೆ ಸಂಬಂಧಿಸಿದ್ದವು ಎಂದು ಹೇಳಲಾಗಿದೆ.

ಲೋಕಾಯುಕ್ತ ಪೊಲೀಸರು ಮಂಗಳವಾರ ಎಂಜಿನಿಯರ್ ವಿಜಯ್ ಕುಮಾರ್ ಅವರನ್ನು ಬಂಧಿಸಿ, ಲೋಕಾಯುಕ್ತ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war effect: ಷೇರು ಮಾರುಕಟ್ಟೆಯಲ್ಲಿ 'ರಕ್ತಪಾತ': ಸೆನ್ಸೆಕ್ಸ್ 1,555 ಅಂಕ ಕುಸಿತ, ನಿಮಿಷಗಳಲ್ಲಿ ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ ನಷ್ಟ..!

West Asia war: ವಿದ್ಯುತ್ ಸ್ಥಾವರಗಳ ಮೇಲೆ ದಾಳಿಯಾದರೆ, ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್; ಇರಾನ್ ಕಠಿಣ ಎಚ್ಚರಿಕೆ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಉರಿದ ಹೊರ್ಮುಸ್; ಮುಂಚೂಣಿಗೆ ಬಂದ ಯುಎಸ್ ಮರೀನ್ಸ್ (ಜಾಗತಿಕ ಜಗಲಿ)

ಇಸ್ರೇಲ್ ಬುಡಕ್ಕೇ ಕೈ ಹಾಕಿದ ಇರಾನ್; Nuclear ಕೇಂದ್ರದ ಮೇಲೆ ಕ್ಷಿಪಣಿ ದಾಳಿ, ಧ್ವಂಸ?

SCROLL FOR NEXT