ಪ್ರಧಾನ ಸುದ್ದಿ

ಮೂರು ಮಹತ್ವಾಕಾಂಕ್ಷಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನಾವರಣಗೊಳಿಸಿದ ಮೋದಿ

Guruprasad Narayana

ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಮೂರು ಮಹತ್ವಾಕಾಂಕ್ಷೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನಾವರಣಗೊಳಿಸಿದ್ದಾರೆ. ವಿಮೆ ಮತ್ತು ಪಿಂಚಣಿಗೆ ಸಂಬಂಧಿಸಿದ ಈ ಯೋಜನೆಗಳು ದೇಶದ ಬಹುಪಾಲು ಜನರಿಗೆ ಸಹಾಯವಾಗಲಿದೆ ಎನ್ನಲಾಗಿದೆ.

ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಮೊದಲ ಬಾರಿಗೆ ಪಶ್ಚಿಮ ಬಂಗಾಳಕ್ಕೆ ತೆರಳಿರುವ ಮೋದಿ, ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನಾ (ಅಪಘಾತ ವಿಮೆ), ಪ್ರಧಾನ ಮಂತ್ರಿ ಜೀವಜ್ಯೋತಿ ಯೋಜನಾ (ಜೀವ ವಿಮೆ) ಹಾಗು ಅಟಲ್ ಪಿಂಚಣಿ ಯೋಜನೆಗಳನ್ನು ನಜುರಲ್ ಮಂಚ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅನಾವರಣಗೊಳಿಸಿದ್ದಾರೆ.

SCROLL FOR NEXT