ನಿತಿನ್ ಗಡ್ಕರಿ 
ಪ್ರಧಾನ ಸುದ್ದಿ

ಗಡ್ಕರಿ ರಾಜೀನಾಮೆಗೆ ಒತ್ತಾಯ; ರಾಜ್ಯಸಭೆ ಕಲಾಪಕ್ಕೆ ಮತ್ತೆ ಅಡ್ಡಿ

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ರಾಜಿನಾಮೆಗೆ ಆಗ್ರಹಿಸಿ ರಾಜ್ಯಸಭೆಯಲ್ಲಿ ಪ್ರತಿಭಟನೆ ಮಂಗಳವಾರ ಕೂಡ ಮುಂದುವರೆದಿದ್ದು ವಿರೋಧ

ನವದೆಹಲಿ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ರಾಜಿನಾಮೆಗೆ ಆಗ್ರಹಿಸಿ ರಾಜ್ಯಸಭೆಯಲ್ಲಿ ಪ್ರತಿಭಟನೆ ಮಂಗಳವಾರ ಕೂಡ ಮುಂದುವರೆದಿದ್ದು ವಿರೋಧ ಪಕ್ಷದ ಸಂಸದರು ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ.

ಕೆಲವು ಕಾಯ್ದೆಗಳು ಮಂಜೂರಾಗದಂತೆ ತಡೆಯಲು ಕಾಂಗ್ರೆಸ್ ಕಲಾಪಕ್ಕೆ ಅಡ್ಡಿ ಪಡಿಸುತ್ತಿದೆ ಎಂದು ರಾಜ್ಯಸಭೆಯ ಅಧ್ಯಕ್ಷ ಅರುಣ್ ಜೇಟ್ಲಿ ದೂರಿದ್ದಾರೆ.

'ಪುರ್ತಿ' ಸಂಸ್ಥೆಯಾಗಲಿ ಅಥಾ ತಾವಾಗಲೀ ಹಣಕಾಸು ವಿಷಯಗಳಲ್ಲಿ ಯಾವುದೇ  ತಪ್ಪೆಸಗಿಲ್ಲ ಎಂದು ನಿತಿನ್ ಗಡ್ಕರಿ ನೆನ್ನೆ ಹೇಳಿದ್ದರು.

ಇಂದು ರಾಜ್ಯಸಭೆ ಕಲಾಪ ಪ್ರಾರಂಭವಾದಾಕ್ಷಣ ರಾಜ್ಯಸಭೆಯ ವಿರೋಧಪಕ್ಷದ ಅಧ್ಯಕ್ಷ ಗುಲಾಂ ನಭಿ ಆಜಾದ್ ಅವರು ಸೋಮವಾರ ಗಡ್ಕರಿ ನೀಡಿದ ಉತ್ತರ ತೃಪ್ತಿದಾಯಕವಾಗಿಲ್ಲ ಎಂದರು.

ಕಾಂಗ್ರೆಸ್ ನ ಪ್ರಮೋದ್ ತಿವಾರಿ ಈಗಾಗಲೇ ನೋಟಿಸ್ ಸಲ್ಲಿಸಿದ್ದು, ರಾಜ್ಯಸಭೆಯ ಇತರ ಕಲಾಪಗಳನ್ನು ರದ್ದುಪಡಿಸಿ ಈ ವಿಷಯದ ಚರ್ಚೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಆಜಾದ್ ಆಗ್ರಹಿಸಿದ್ದಾರೆ.

"ಈಗ ಸಾರ್ವಜನಿಕ ಲೆಕ್ಕಪತ್ರಗಳ ಪರಿಶೀಲನಾ ಸಮಿತಿ ಸಿ ಎ ಜಿ ವರದಿಯನ್ನು ಚರ್ಚಿಸಲಿದೆ. ನೆನ್ನೆ ಸಚಿವರು ಇಲ್ಲಿಗೆ ಬಂದಿದ್ದಾಗ ನೀವು ಸ್ಪಷ್ಟನೆ ಕೇಳಲಿಲ್ಲವೇಕೆ" ಎಂದು ಜೇಟ್ಲಿ ಪ್ರಶ್ನಿಸಿದ್ದಾರೆ.

"ಇದು ಅಂತಹ ಮಹತ್ವದ ವಿಷಯವೇನಲ್ಲ.... ನೀವು ಕಲಾಪಕ್ಕೆ ಅಡ್ಡಿಪಡಿಸುತ್ತಿರುವುದು ಏಕೆಂದರೆ ಕೆಲವು ಪ್ರಮುಖ ಕಾಯ್ದೆಗಳನ್ನು ಇಲ್ಲಿ ಮಂಜೂರು ಮಾಡುವುದು ನಿಮಗೆ ಇಷ್ಟವಿಲ್ಲ" ಎಂದು ಜೇಟ್ಲಿ ದೂರಿದ್ದಾರೆ.

ಇದು ವಿರೋಧ ಪಕ್ಷ ಸದಸ್ಯರ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದ್ದರಿಂದ, ಕಲಾಪವನ್ನು ಮೊದಲಿಗೆ ೧೧:೩೦ ರವರೆಗೆ ಮುಂದೂಡಿ ನಂತರ ಮಧ್ಯಾಹ್ನ ೧೨ ರವರೆಗೆ ಮುಂದೂಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT